ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಆತ್ಮಹತ್ಯೆಯ ಬಗ್ಗೆ ಯೋಚಿಸುತ್ತಿದ್ದೇನೆ!

ದೇವರಾಣೆಗೂ ಹೌದು ನಾನು ಆತ್ಮಹತ್ಯೆಯ ಬಗ್ಗೆಯೇ ಯೋಚಿಸುತ್ತಿದ್ದೇನೆ. ಇದು ಭಾರತೀಯ ಕಾನೂನಿನ ಪ್ರಕಾರ ತಪ್ಪು ಅಂತ ಚೆನ್ನಾಗಿ ಗೊತ್ತು. ಆತ್ಮಹತ್ಯೆಗೆ ಯತ್ನಿಸಿ ಒಂದು ವೇಳೆ ಅದರಲ್ಲಿ ಸಫಲನಾಗದಿದ್ದರೆ ಭಾರತೀಯ ದಂಡಸಂಹಿತೆಯ ಪ್ರಕಾರ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯ ಮೇಲೆ ಕೇಸು ಹಾಕಬಹುದು, ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ಆ ವ್ಯಕ್ತಿಗೆ ಶಿಕ್ಷೆಯನ್ನೂ ವಿಧಿಸಬಹುದು ಅಂತಲೂ ಗೊತ್ತಿದೆ. ಅದಲ್ಲದೆ, ಇನ್ನೊಬ್ಬ ವ್ಯಕ್ತಿಯನ್ನು ಆತ್ಮಹತ್ಯೆಗೆ ಪ್ರಚೋದಿಸುವುದು ಕೂಡ ಕಾನೂನಿನ ಪ್ರಕಾರ ಮತ್ತು ನೈತಿಕ ದೃಷ್ಟಿಯಿಂದಲೂ ಅಪರಾಧ ಎಂಬ ಅರಿವೂ ಇದೆ. ಆದರೂ 'ಆತ್ಮಹತ್ಯೆ'ಯ ಬಗ್ಗೆಯೇ ಯೋಚಿಸುತ್ತಿದ್ದೇನೆ! ಅನುಮಾನ ಬೇಡ. ದಿನಂಪ್ರತಿ ಪತ್ರಿಗಳಲ್ಲಿ ಮತ್ತು ವಾರ್ತಾ ವಾಹಿನಿಗಳಲ್ಲಿ ಆತ್ಮಹತ್ಯೆಯ ವರದಿಗಳನ್ನು ನೋಡಿ, ಕೇಳಿ, ಓದಿ ಬೇಸರ ಮೂಡಿದೆ. ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಲಿಲ್ಲ ಎಂಬ ಕಾರಣಕ್ಕೆ ಕೀಟನಾಶಕ ಸೇವಿಸಿಯೋ ಅಥವಾ ನೇಣು ಬಿಗಿದುಕೊಂಡೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ತಮ್ಮ ನಿರೀಕ್ಷೆಗೆ ತಕ್ಕಂತೆ ಪರೀಕ್ಷೆಯಲ್ಲಿ ಅಂಕ ಬರಲಿಲ್ಲ ಅಂತಲೋ ಅಥವಾ ರ್ಯಾಂಕ್ ತಪ್ಪಿಹೋಯಿತು ಅಂತಲೋ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಪ್ರೇಮಿಗಳ ಆತ್ಮಹತ್ಯೆಯ ಬಗ್ಗೆ ಬರೆದರೆ ಜಾಗ ಹಾಳು, ಹೇಳಿದರೆ ಬಾಯಿ ಹಾಳು. ಅವಳು ಬೈದಳು, ಅವನು ಕೈಕೊಟ್ಟ ಹೀಗೆ ನಾನಾ ಕಾರಣ ಒಡ್ಡಿ ಪ್ರೇಮಿಗಳು ಆತ್ಮಹತ್ಯೆ ಮಾ

"ಮತಾಂತರ - ಭಯೋತ್ಪಾದನೆ – ಕೋಮುವಾದ"

(ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಡಿಸೆಂಬರ್ ೨೮, ೨೦೦೮ರಂದು ’ಜೈಕನ್ನಡಮ್ಮ’ ವಾರಪತ್ರಿಕೆಯ ದಶಮಾನೋತ್ಸವ ಸಮಾರಂಭ ನಡೆಯಿತು. ಅಂದು ’ಭಯೋತ್ಪಾದನೆ, ಮತಾಂತರ ಮತ್ತು ಕೋಮುವಾದ’ ವಿಷಯದ ಬಗ್ಗೆ ನಾನು ಮಂಡಿಸಿದ ವಿಚಾರಗಳು.) ಸಭಾಧ್ಯಕ್ಷರೆ, ವೇದಿಕೆಯಲ್ಲಿರುವ ಸಂಪನ್ಮೂಲ ವ್ಯಕ್ತಿಗಳೇ ಹಾಗೂ ನೆರೆದಿರುವ ಎಲ್ಲ ಸಹೃದಯರೆ, ಇಂದು ನನಗೆ ಪೂರಕ ಮಾಹಿತಿಗಳನ್ನಾಡಲು ಸೂಚಿಸಿರುವ ವಿಷಯ ಭಯೋತ್ಪಾದನೆ - ಕೋಮುವಾದ - ಮತಾಂತರ. ಬಹುಷಃ ಈ ಮೂರು ವಿಚಾರಗಳು ನಮ್ಮ ದೇಶವನ್ನು ತೀವ್ರವಾಗಿ ಕಾಡುತ್ತಿರುವ ಸಮಸ್ಯೆಗಳು ಅನ್ನುವುದನ್ನು ಎಲ್ಲರೂ - ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ - ಒಪ್ಪುತ್ತಾರೆ ಎಂದು ನಂಬಿದ್ದೇನೆ. ಹಾಗಾಗಿ ಈ ವಿಚಾರಗಳ ಬಗ್ಗೆ ಲಘುವಾಗಿ ಮಾತನಾಡುವುದು ಸಾಧ್ಯವಾಗದು. ಆದರೂ ನನಗೆ ನೀಡಿರುವ ಸಮಯದ ಪರಿಮಿತಿಯಲ್ಲಿ ಈ ವಿಚಾರಗಳ ಬಗ್ಗೆ ನನ್ನ ಅಭಿಪ್ರಾಯವನ್ನು ಮಂಡಿಸುವ ಪ್ರಯತ್ನ ಮಾಡುತ್ತೇನೆ. ಭಯೋತ್ಪಾದನೆ ಎಂಬ ಪದದ ಅರ್ಥ ಮೇಲ್ನೋಟಕ್ಕೆ ಬಹಳ ಸರಳವಾಗಿದೆ. ಭಯದ ಉತ್ಪಾದನೆ, ಯಾರು ಇನ್ನೊಬ್ಬರ ಮನಸ್ಸಿನಲ್ಲಿ ತನ್ನ ಕೃತ್ಯಗಳಿಂದ ಭೀತಿಯನ್ನು ಮೂಡಿಸುತ್ತಾನೋ ಅವನನ್ನು ಭಯೋತ್ಪಾದಕ ಅನ್ನಬಹುದು ಹಾಗೂ ಆ ಪ್ರಕ್ರಿಯೆಯನ್ನು ಭಯೋತ್ಪಾದನೆ ಎಂದು ಕರೆಯಬಹುದು. ಇದರರ್ಥ ಬ್ರಿಟಿಷ್ ಅಧಿಕಾರಿ ಜನರಲ್ ಡಯರ್ ಭಾರತೀಯರ ಪಾಲಿಗೆ ಭಯೋತ್ಪಾದಕನಾದರೆ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಪಾಲಿಗೆ ಭಯೋತ್ಪಾದಕರಾಗಿ ಕಾಣಬಹುದು!