ವಿಷಯಕ್ಕೆ ಹೋಗಿ

"ಪ್ರತಿಭಟನೆ, ಬಂದ್‌ನ ಆಚೆಗೂ ವಿದ್ಯಾರ್ಥಿ ಪರಿಷತ್ ಕೆಲಸ ಮಾಡುತ್ತಿದೆ"


ಅಕ್ಟೋಬರ್ ೯ ರಿಂದ ೧೧ರವರೆಗೆ ಬಳ್ಳಾರಿಯ ರಾಘವ ಕಲಾಮಂದಿರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ’ರಂಗತೋರಣ’ ವಿದ್ಯಾರ್ಥಿ ನಾಟಕೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು. ನಾಟಕೋತ್ಸವದಲ್ಲಿ ಸ್ಪರ್ಧಿಸಿದ್ದ ಸುಮಾರು ೨೭ ನಾಟಕಗಳ ಪೈಕಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಮ್‌ಬಿಅ ಕಾಲೇಜಿನ ವಿದ್ಯಾರ್ಥಿಗಳು ಆಡಿದ ’ನಾನು ಮತ್ತು ನಾಳೆ’ ನಾಟಕ ಪ್ರಥಮ ಬಹುಮಾನ ಪಡೆದುಕೊಂಡಿತು.

೨೦೦೩ನೆಯ ಇಸವಿಯಲ್ಲಿ ಪ್ರಾರಂಭಗೊಂಡ ಈ ನಾಟಕೋತ್ಸವಕ್ಕೆ ಈ ಬಾರಿ ಐದರ ಹರೆಯ. ಇಡೀ ನಾಟಕೋತ್ಸವದ ರೂವಾರಿ, ನಾಟಕೋತ್ಸವದುದ್ದಕ್ಕೂ ಪಾದರಸದಂತೆ ಓಡಾಡುತ್ತಾ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರನ್ನು ಪ್ರತಿ ನಿಮಿಷವೂ ಹುರಿದುಂಬಿಸುತ್ತಿದ್ದ ಪ್ರೊ. ಭೀಮಸೇನ್ ಅವರ ಜೊತೆ ಆಡಿದ ಎರಡು ಮಾತುಗಳು ಇಲ್ಲಿವೆ.

*****

ಎಬಿವಿಪಿಯವರು ಎಂದರೆ ಕೇವಲ ಬಂದ್ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ನಕಾರಾತ್ಮಕ ಹಣೆಪಟ್ಟಿಗಳಿದ್ದರೂ ವಿದ್ಯಾರ್ಥಿ ಪರಿಷತ್ತಿನವರು ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತೆಗೆಯುವತ್ತ ಮಾಡುತ್ತಿರುವ ಕೆಲಸದ ಕೆಲವು ಝಲಕ್ ಕೂಡ ಇಲ್ಲಿದೆ.

*****

"ಇದು ನಮ್ಮ ಐದನೆಯ ವರ್ಷದ ರಂಗತೋರಣ. ಈ ನಾಟಕೋತ್ಸವವನ್ನು ಆರಂಭಸಲು ಸಾಕಷ್ಟು ಕಾರಣಗಳಿವೆ. ಸಾಮಾನ್ಯವಾಗಿ ಎಬಿವಿಪಿಯ ಹುಡುಗರು ಎಂದರೆ ಬಂದ್ ಮಾಡುವವರು, ಗಲಾಟೆ ಮಾಡುವವರು, ಪ್ರತಿಭಟನೆ ಮಾಡುವವರು ಎಂಬೆಲ್ಲಾ ಹಣೆಪಟ್ಟಿಗಳಿವೆ. ಆದರೆ ಬಂದ್, ಪ್ರತಿಭಟನೆ ಮತ್ತು ಗಲಾಟೆಯ ಆಚೆಗೂ ಎಬಿವಿಪಿಯ ಹುಡುಗರು ಕೆಲಸ ಮಾಡುತ್ತಾರೆ. ಅವರ ಪ್ರತಿಭೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಿಸಿದೆ."

"ರಜಾ ದಿನಗಳಲ್ಲಿ ಎಬಿವಿಪಿಯ ಹುಡುಗರಿಗೆ ಸಮಯ ನಿರ್ವಹಣೆ, ನಾಯಕತ್ವದ ಕೌಶಗಳು, ಪರಿಣಾಮಕಾರಿ ಸಂವಹನ ಕಲೆ, ವಿಜ್ಞಾನ ಹೀಗೆ ಅನೇಕ ವಿಷಯಗಳ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ನಮಗೆ ಇಂಥ ಎಲ್ಲ ಕಲೆ-ಕೌಶಲಗಳನ್ನು ಒಂದೇ ಮಾಧ್ಯಮದ ಮೂಲಕ ಪರಿಣಾಮಕಾರಿಯಾಗಿ ಕಲಿಸುವ ಆಸೆಯಿತ್ತು."

"ಇಂಥ ಸಂದರ್ಭದಲ್ಲಿಯೇ ಕನ್ನಡ ಹಿರಿಯ ನಾಟಕಕಾರ ಡಾ ಚಂದ್ರಶೇಖರ ಕಂಬಾರರಿಗೆ ನಾಡೋಜ ಪ್ರಶಸ್ತಿ ಬಂತು. ಆಗ ನಾವೂ ನಾಟಕಗಳ ಬಗ್ಗೆ ಏನಾದರೂ ಮಾಡಬೇಕು. ನಾಟಕಕ್ಕಾಗಿ ಕೆಲಸ ಮಾಡಬೇಕು ಎಂಬ ಆಸೆ ಮನಸ್ಸಿನಲ್ಲಿ ಮೂಡಿತು."

"ನಾಯಕತ್ವದ ಕಲೆ, ಪರಿಣಾಮಕಾರಿ ಸಂವಹನ, ಸಮಯ ನಿರ್ವಹಣೆ ಇಂಥಹ ಅನೇಕ ಕೌಶಲಗಳನ್ನು ವ್ಯವಸ್ಥಿತವಾಗಿ ಮೈಗೂಡಿಸಿಕೊಳ್ಳಬೇಕಾದದ್ದು ಒಬ್ಬ ನಾಟಕಕಾರನ ಮತ್ತು ನಟನ ಅಗತ್ಯ ಗುಣ. ಎಬಿವಿಪಿಯವರು ಹೇಗಿದ್ದರೂ ಇಂಥ ಕೌಶಲಗಳನ್ನು ಅನೇಕ ಕಾರ್ಯಕ್ರಮಗಳ ಮೂಲಕ ತಮ್ಮ ಹುಡುಗರಿಗೆ ಕಲಿಸುತ್ತಾರೆ. ಹಾಗೆ ಕಲಿತ ವಿಚಾರಗಳ ಅಭಿವ್ಯಕ್ತಿ ಹೇಗಾಗುತ್ತದೆ ಎಂದು ನೋಡಬೇಕು. ಅದಕ್ಕೆ ನಾಟಕಕ್ಕಿಂತ ಪರಿಣಾಮಕಾರಿ ಮಾಧ್ಯಮ ಯಾವುದಿದೆ?"

"ಈ ಒಂದು ಅಂಶವನ್ನು ಮನಸ್ಸಿನಲ್ಲಿಟ್ಟುಕೊಂಡು ನಾವು ೨೦೦೩ ರಲ್ಲಿ ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ನಾಟಕೋತ್ಸವವನ್ನು ’ರಂಗತೋರಣ’ ಎಂಬ ಹೆಸರಿನಲ್ಲಿ ಆರಂಭಿಸಿದೆವು. ಜಿಲ್ಲಾ ಮಟ್ಟದಲ್ಲಿ ನಡೆದ ಮೊದಲ ನಾಟಕೋತ್ಸವದಲ್ಲಿ ಏಳು ತಂಡಗಳು ಭಾಗವಹಿಸಿದ್ದವು."

"ನಂತರ ೨೦೦೪ರಲ್ಲಿ ಎರಡನೆಯ ರಂಗತೋರಣ ವಿಭಾಗ ಮಟ್ಟದಲ್ಲಿ ನಡೆಯಿತು. ಗುಲ್ಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಗುಲ್ಬರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿ ನಾಟಕ ತಂಡಗಳು ಈ ಉತ್ಸವದಲ್ಲಿ ಭಾಗವಹಿಸಿದ್ದವು. ೨೦೦೭ನೆಯ ಇಸವಿಯಿಂದ ಈ ಉತ್ಸವ ರಾಜ್ಯಮಟ್ಟದ್ದಾಯಿತು."

"ಪಿಯುಸಿಯಿಂದ ಹಿಡಿದು ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳವರೆಗೆ ಈ ನಾಟಕೋತ್ಸವದಲ್ಲಿ ಭಾಗವಹಿಸುತ್ತಾರೆ. ಇಲ್ಲಿ ಸಿದ್ಧಾಂತ ಬೇಧಗಳನ್ನು ಮರೆತು ಎಲ್ಲ ರೀತಿಯ ನಾಟಕಗಳನ್ನು ಪ್ರದರ್ಶಿಸಲಾಗುತ್ತದೆ."

"ಈ ನಾಟಕೋತ್ಸವವನ್ನು ಪ್ರತಿ ವರ್ಷವೂ ಬಳ್ಳಾರಿಯಲ್ಲೇ ನಡೆಸುವುದಕ್ಕೆ ಕಾರಣವಿದೆ. ಬಳ್ಳಾರಿಯ ರಾಘವ ಅವರು ಮತ್ತು ಬೀಚಿಯವರು ನಾಟಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು ಸಂಪಾದಿಸಿದ್ದವರು. ಅದು ನಿಮಗೂ ಗೊತ್ತು. ಬಳ್ಳಾರಿಯ ರಾಘವರಂತೂ ಷೇಕ್ಸ್‌ಪಿಯರ್‌ನ ನಾಟಕಗಳನ್ನು ಜಾರ್ಜ್ ಬರ್ನಾರ್ಡ್ ಷಾ ಎದುರಿಗೆ ಆಡಿತೋರಿಸಿದ್ದರಂತೆ. ಷೇಕ್ಸ್‌ಪಿಯರ್‌ಗೂ ಬರ್ನಾರ್ಡ್ ಷಾಗೂ ಆಗಿಬರುತ್ತಿರಲಿಲ್ಲ. ಆದರೂ ಬರ್ನಾರ್ಡ್ ಷಾ ರಾಘವರು ಆ ನಾಟಕಗಳನ್ನು ಆಡುತ್ತಿದ್ದಾರೆ ಎಂಬ ಕಾರಣಕ್ಕಾಗಿಯೇ ಅದನ್ನು ನೋಡುತ್ತಿದ್ದರಂತೆ."

"ಒಮ್ಮೆ ಗಾಂಧೀಜಿಯವರು ಇಲ್ಲಿಗೆ ಬಂದಿದ್ದಾಗ ಅವರೆದುರಿಗೆ ಒಂದು ನಾಟಕ ತೋರಿಸುವ ಆಸೆಯಾಯಿತಂತೆ. ಗಾಂಧೀಜಿಯವರಿಗೆ ಬಹಳ ಕೆಲಸವಿತ್ತು. ಆದರೂ ಇಪ್ಪತ್ತು ನಿಮಿಷಗಳ ಮಟ್ಟಿಗೆ ನಾಟಕ ನೋಡಲು ಕುಳಿತರು. ನಾಟಕ ನೋಡುವುದರಲ್ಲಿ ತಲ್ಲೀನರಾಗಿಬಿಟ್ಟ ಗಾಂಧೀಜಿ ತಮ್ಮ ಪ್ರಾರ್ಥನೆಯ ಸಮಯವನ್ನೂ ಮರೆತು ನಾಟಕ ನೋಡಿದರಂತೆ. ನಂತರ ರಾಘವರ ಬೆನ್ನು ತಟ್ಟಿ ಹೋದರಂತೆ. ಅಷ್ಟೇ ಅಲ್ಲದೆ, ತಿಲಕರೆದುರು ಮಹಾತ್ಮಾ ಕಬೀರ್ ನಾಟಕವನ್ನು ಆಡಿ ತೋರಿಸಿದ್ದರಂತೆ ನಮ್ಮ ರಾಘವರು."

"ಅಂಥ ನಾಟಕಕಾರರು ಮತ್ತು ಸಾಹಿತಿಗಳು ಜನಿಸಿದ ಈ ನಾಡಿನಲ್ಲಿ ನಾಟಕ ಕಾರ್ಯಕ್ರಮಗಳಿಗೆ ಬಹುವಾದ ಬೆಂಬಲವಿದೆ. ಇಲ್ಲಿ ವೃತ್ತಿ ರಂಗಭೂಮಿ ಕಲಾವಿದರ ಬಹುದೊಡ್ಡ ದಂಡೇ ಇದೆ. ಇದು ಒಂದರ್ಥದಲ್ಲಿ ವೃತ್ತಿ ರಂಗಭೂಮಿ ಕಲಾವಿದರ ತವರೂರು."

"ಹಾಗಾಗಿ ಬಳ್ಳಾರಿಯ ಸಾಂಸ್ಕೃತಿಕ ಮುಖವನ್ನು ಜನರಿಗೆ ತೋರಿಸುವುದಕ್ಕೋಸ್ಕರ ಮತ್ತು ರಾಜಕೀಯದಾಚೆಗೂ ಬಳ್ಳಾರಿಗೆ ಒಂದು ಒಳ್ಳೆಯ ಹೆಸರಿದೆ ಎಂಬುದನ್ನು ಜನರಿಗೆ ತೋರಿಸಲು ಈ ಉತ್ಸವವನ್ನು ಬಳ್ಳಾರಿಯಲ್ಲೇ ನಡೆಸುತ್ತೇವೆ."

ಕಾಮೆಂಟ್‌ಗಳು

Unknown ಹೇಳಿದ್ದಾರೆ…
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮ ಚೆನ್ನಾಗಿದೆ. ನನಗೆ ಪತ್ರಿಕೆ ತೋರಿಸಲಿಲ್ಲಾ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರು ನ...
Merchant of death? It is, by now, a well known fact to the nation that the remark of Sonia Gandhi of the Congress party calling Modi “the merchant of death” during the campaign for Gujarat assembly elections acted as catalyst in favour of the Bharatiya Janata Party which eventually led to the triumphant victory of the latter in the elections. Well, that is not the core issue of this article, but truly the remark of Sonia Gandhi on Modi will be taken into account in the later part of this article. Indira Gandhi, the former Prime Minister of India ordered for a military expedition on Golden Temple of Amritsar which is the most sacred/holy place for the Sikhs. The military operation which targeted the Sikh terrorists who were sheltered in the Golden Temple under the leadership of Jarneil Singh Bhindranwale was aimed at eliminating the Sikh militancy from India and this military operation had been named “Operation Blue Star”. Indira Gandhi, in spite of aware of the fact that her life was u...

Remember, we have sisters at home…

He was a married man of 30 and had two kids. What’s more, he had a loving spouse who loved him more than anybody could love! He was workin g in a sales promoting company where he, for the second time, fell in love with a charming lady. She was his colleague of 25 and single who loved him in spite of knowing his marital status. Suddenly one day he decided to marry his girlfriend and hence divorced his wife. His new wife didn’t had to wait long to witness his ugly face. She had to face many irking words daily. He used to beat her daily and force himself on her whenever she refused to respond to his sexual urges. She was actually raped by the same man whom, she thought, she loved! The above story is not one of Ekta Kapoor’s ‘K’ series, but is the story of hundreds of Indian women. Now imagine a married woman trying to marry for the second time when her husband is still alive! Imagine a mother of two kids falling in love with a man younger to her or at least imagine a widow expressing her ...