ವಿಷಯಕ್ಕೆ ಹೋಗಿ

ಮೂರು ತೀರ್ಪುಗಳ ಕತೆ

ಸುಪ್ರೀಂ ಕೋರ್ಟ್‌ ಮತ್ತು ಹೈ­ಕೋರ್ಟ್‌­­­ಗಳಿಗೆ ನ್ಯಾಯ­ಮೂರ್ತಿಗಳನ್ನು ‘ಕೊಲಿ­ಜಿಯಂ’ ಮೂಲಕ ನೇಮಕ ಮಾಡ­ಬೇಕು ಎಂದು ಸಂವಿಧಾನ ಹೇಳುವುದಿಲ್ಲ. ಆದರೆ 1993ರಲ್ಲಿ ಸುಪ್ರೀಂ ಕೋರ್ಟ್‌ನ ವಿಸ್ತೃತ ಪೀಠ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ನೇಮಕ ‘ಕೊಲಿಜಿಯಂ’ ಮೂಲಕ ಆಗಬೇಕು ಎಂದು ಹೇಳಿತು.
ಭಾರತದ ನ್ಯಾಯಾಂಗಕ್ಕೆ ನಡೆಯುವ ನೇಮಕಾತಿಗಳು ಕೊಲಿಜಿಯಂ ಮೂಲಕ ಆಗಬೇಕು ಎಂಬ ವ್ಯವಸ್ಥೆ ಜಾರಿಗೆ ಬಂದಿದ್ದು ಹಂತಹಂತವಾಗಿ. ಇದೊಂದು ವಿಕಸನದ ಕತೆ. ಕಾರ್ಯಾಂ­ಗವು ನ್ಯಾಯಾಂ­ಗದ ಜೊತೆ ಸಂಘರ್ಷಕ್ಕೆ ಮುಂದಾ­ದಾಗ ರಕ್ಷಣಾತ್ಮಕ ಕ್ರಮವಾಗಿ ‘ಕೊಲಿಜಿಯಂ’ ವ್ಯವಸ್ಥೆ ಜನ್ಮತಾಳಿತು ಎಂಬ ವಾದ ಇದೆ. ಕೊಲಿಜಿಯಂ ವ್ಯವಸ್ಥೆ ವಿಕಸನ ಹೊಂದಲು ಮೂಲ, ಕೇಂದ್ರ ಕಾನೂನು ಸಚಿವರು ಹೊರಡಿ­ಸಿದ ಒಂದು ಸುತ್ತೋಲೆ ಎಂದು ತಜ್ಞರು ಹೇಳುತ್ತಾರೆ.
‘ಯಾವುದೇ ರಾಜ್ಯದ ಹೈಕೋರ್ಟ್‌ನ ಶೇಕಡ 33ರಷ್ಟು ನ್ಯಾಯಮೂರ್ತಿಗಳು ಹೊರ ರಾಜ್ಯ­ಗಳಿಗೆ ಸೇರಿದವರಾಗಿದ್ದರೆ ಉತ್ತಮ. ದೇಶದಲ್ಲಿ ಏಕತೆ ಮೂಡಿಸಲು ಇದು ನೆರವಾಗುತ್ತದೆ’ ಎಂಬ ಮಾತಿ­ನೊಂದಿಗೆ 1981ರಲ್ಲಿ ಹೊರಡಿಸಿದ್ದ ಸುತ್ತೋಲೆ ಆರಂಭವಾಗುತ್ತದೆ. ಪಂಜಾಬ್‌ನ ರಾಜ್ಯಪಾಲರು ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ (ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ) ರವಾನಿಸಿದ ಸುತ್ತೋಲೆ ಇದು. ನಂತರ ಈ ಸುತ್ತೋಲೆಯಲ್ಲಿ ಒಂದು ಮಾತು ಬರುತ್ತದೆ.
‘ನಿಮ್ಮ ರಾಜ್ಯಗಳ ಹೈಕೋರ್ಟ್‌ನಲ್ಲಿ ಹೆಚ್ಚು­ವರಿ ನ್ಯಾಯಮೂರ್ತಿ ಯಾಗಿ ಕೆಲಸ ಮಾಡು­ತ್ತಿರು­ವವರಿಂದ, ಬೇರೆ ರಾಜ್ಯಗಳ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ವರ್ಗಾವಣೆ ಹೊಂದಲು ಒಪ್ಪಿಗೆ ಪತ್ರ ಪಡೆದುಕೊಳ್ಳಿ’ ಎಂಬ ಸಂದೇಶ ಅದರಲ್ಲಿ ಇತ್ತು. ಇದು ನ್ಯಾಯಾಂಗದ ಮೇಲೆ ರಾಜಕೀಯ ಹಿಡಿತ ಸಾಧಿಸುವ ಯತ್ನ ಎಂಬ ಆರೋಪಗಳು ಆ ಸಂದರ್ಭ­ದಲ್ಲಿ ಕೇಳಿಬಂದವು. ಕಾನೂನು ಸಚಿವರ ಸುತ್ತೋಲೆಯನ್ನು ಬೇರೆ ಬೇರೆ ನೆಲೆಗಳಲ್ಲಿ ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾದವು. ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ 1981ರ ಡಿಸೆಂಬರ್‌ನಲ್ಲಿ ‘ಎಸ್‌.ಪಿ. ಗುಪ್ತ ಮತ್ತು ಭಾರತದ ರಾಷ್ಟ್ರಪತಿ’ ನಡುವಿನ ಪ್ರಕರಣದಲ್ಲಿ ಒಂದು ತೀರ್ಪು ನೀಡಿತು.
ನ್ಯಾಯಾಂಗದ ನೇಮಕಾತಿಗಳಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರಿಗೆ ಪರಮಾಧಿಕಾರ ಇಲ್ಲ ಎಂದು ಸುಪ್ರೀಂ ಪೀಠ ಹೇಳಿತು. ‘ಈ ತೀರ್ಪು ನೀಡಿದ ವಿಭಾಗೀಯ ಪೀಠದ ಬಹುಪಾಲು ನ್ಯಾಯಮೂರ್ತಿಗಳು, ನ್ಯಾಯಾಂ­ಗಕ್ಕೆ ನಡೆಯುವ ನೇಮಕಾತಿಗಳಲ್ಲಿ ಕಾರ್ಯಾಂಗಕ್ಕೆ ಹೆಚ್ಚಿನ ಅಧಿಕಾರ ನೀಡಿದ್ದರು’ ಎಂದು ವಕೀಲೆ ಜಿಯಾ ಮೋದಿ ಅವರು ‘ಭಾರತವನ್ನು ಬದಲಿಸಿದ 10 ತೀರ್ಪು­ಗಳು’ (Ten Judgements that Changed India) ಕೃತಿಯಲ್ಲಿ ಹೇಳಿದ್ದಾರೆ. ಈ ತೀರ್ಪು ಬಂದ ಒಂದು ದಶಕದವರೆಗೆ ನ್ಯಾಯಾಂಗಕ್ಕೆ ನಡೆಯುವ ನೇಮಕಾತಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.
ಎರಡನೆಯ ಪ್ರಕರಣ: 1980ರ ದಶಕದಲ್ಲಿ ಒಂದು ಮಹತ್ವದ ಬೆಳವಣಿಗೆ ನಡೆಯಿತು. ವಕೀಲ ಸುಭಾಷ್‌ ಶರ್ಮ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ವಿವಿಧ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿ ಮಾಡುವಂತೆ ಕೋರಿದರು. ಇದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಎಸ್‌.ಪಿ. ಗುಪ್ತ ಪ್ರಕರಣ­ದಲ್ಲಿ ನೀಡಿದ ತೀರ್ಪಿನ ಪುನರ್‌ ಪರಿಶೀಲನೆ­ಯನ್ನು ವಿಸ್ತೃತ ಪೀಠವೊಂದು ನಡೆಸಬೇಕು ಎಂಬ ಅಭಿಪ್ರಾಯಕ್ಕೆ ಬಂತು. ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ವಿಸ್ತೃತ ಪೀಠ ನಡೆಸಿದ ವಿಚಾರಣೆ ‘ಸುಪ್ರೀಂ ಕೋರ್ಟ್‌ ಅಡ್ವೊಕೇಟ್ಸ್‌ ಆನ್‌ ರೆಕಾರ್ಡ್‌ ಮತ್ತು ಕೇಂದ್ರ ಸರ್ಕಾರದ ನಡುವಿನ ಪ್ರಕರಣ’ ಎಂದೇ ಖ್ಯಾತ­ವಾಗಿದೆ.
ಈ ಪ್ರಕರಣದಲ್ಲಿ 1993ರಲ್ಲಿ ನೀಡಿದ ತೀರ್ಪಿನ ಅನ್ವಯ, ನ್ಯಾಯಾಂ­ಗದ ನೇಮಕಾತಿಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಹೆಚ್ಚಿನ ಅಧಿಕಾರ ದೊರೆಯಿತು. ನ್ಯಾಯ­ಮೂರ್ತಿಗಳ ನೇಮಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ­ಯವರು ತನ್ನ ಇಬ್ಬರು ಅತ್ಯಂತ ಹಿರಿಯ ಸಹೋ­ದ್ಯೋಗಿ­ಗಳ (ನ್ಯಾಯಮೂರ್ತಿಗಳು) ಜೊತೆ ಸಮಾಲೋಚಿಸಬೇಕು ಎಂಬ ನಿಯಮ ಚಾಲ್ತಿಗೆ ಬಂತು. ಸಿಜೆಐ ತನ್ನ ಹಿರಿಯ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನೇಮಕಾತಿಗೆ ಸಂಬಂಧಿಸಿದ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದಾಗಿನಿಂದ ’ಕೊಲಿಜಿಯಂ’ ವ್ಯವಸ್ಥೆ ಜನ್ಮತಾಳಿತು.
ಈ ತೀರ್ಪಿನ ಕಾರಣ, ಎಸ್‌.ಪಿ. ಗುಪ್ತ ಪ್ರಕರಣದಲ್ಲಿ ನೀಡಿದ ತೀರ್ಪು ಬದಿಗೆ ಸರಿಯಿತು. ನ್ಯಾಯಾಂಗದ ನೇಮಕಾತಿಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರ ನ್ಯಾಯಾಂಗಕ್ಕೇ ದೊರೆ­ಯಿತು. ಆದರೆ ನೇಮಕಾತಿಗಳಲ್ಲಿನ ಅಧಿಕಾರ­ವನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯ­ಮೂರ್ತಿ, ಹೈಕೋರ್ಟ್‌ ಮುಖ್ಯ ನ್ಯಾಯ­ಮೂರ್ತಿ ಮಾತ್ರವಲ್ಲದೆ, ಆಯಾ ನ್ಯಾಯಾಲಯಗಳ ಕನಿಷ್ಠ ಇಬ್ಬರು ಹಿರಿಯ ನ್ಯಾಯಮೂರ್ತಿಗಳಿಗೂ ನೀಡಿತು. ನೇಮಕಾತಿ ಅಧಿಕಾರವನ್ನು ಅಷ್ಟರ­ಮಟ್ಟಿಗೆ ವಿಕೇಂದ್ರೀಕರಣ ಮಾಡಲಾಯಿತು ಎನ್ನುತ್ತಾರೆ ಜಿಯಾ ಮೋದಿ.
ಆದರೆ ಈ ತೀರ್ಪಿನ ಕುರಿತು ಸಾಕಷ್ಟು ಟೀಕೆ­ಗಳೂ ಇವೆ. ಸುಪ್ರೀಂ ಕೋರ್ಟ್‌, ನ್ಯಾಯಾಂ­ಗದ ನೇಮಕಾತಿಗಳಲ್ಲಿ ಸಿಜೆಐ ಜೊತೆ ‘ಸಮಾಲೋಚನೆ’ ನಡೆಸಬೇಕು ಎಂಬುದನ್ನು ಸಿಜೆಐ ‘ಸಮ್ಮತಿ’ ಬೇಕು ಎನ್ನುವ ಮೂಲಕ ಈ ತೀರ್ಪು, ಸಂವಿಧಾನದ ಕೆಲವು ಅಂಶಗಳನ್ನು ತಿದ್ದಿತು ಎಂಬ ಮಾತೂ ಇದೆ. ಈ ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ಮುಂಚೂಣಿಯಲ್ಲಿ ನಿಂತು ವಾದ ಮಂಡಿಸಿದ ಹಿರಿಯ ವಕೀಲ ಫಾಲಿ ಎಸ್‌. ನಾರಿಮನ್‌ ಅವರು ತಮ್ಮ ಆತ್ಮಕಥೆ ‘ನೆನಪು ಮಾಸುವ ಮುನ್ನ’ (Before Memory Fades) ಪುಸ್ತಕದಲ್ಲಿ: ‘ಈ ಪ್ರಕರಣದಲ್ಲಿ ನಾನು ಸೋಲಬೇಕಿತ್ತು. ಆದರೆ ಗೆದ್ದುಬಿಟ್ಟೆ’ ಎಂದು ಬರೆದಿದ್ದಾರೆ.
ಮೂರನೆಯ ಪ್ರಕರಣ: 1997–98ರಲ್ಲಿ ಸುಪ್ರೀಂ ಕೋರ್ಟ್‌ನ ಅಂದಿನ ಮುಖ್ಯ ನ್ಯಾಯಮೂರ್ತಿ ಎಂ.ಎಂ. ಪುಂಚಿ ಅವರು ಐವರನ್ನು ನ್ಯಾಯ­ಮೂರ್ತಿ­ಗಳನ್ನಾಗಿ ನೇಮಕ ಮಾಡಲು ಶಿಫಾರಸು ಮಾಡಿ­ದರು. ಆದರೆ ಇವರ ಅರ್ಹತೆ ಕುರಿತ ಪ್ರಶ್ನೆ­ಗಳನ್ನು ಎತ್ತಿದ ಕಾರ್ಯಾಂಗ, ನೇಮಕ ಮಾಡಲು ನಿರಾಕರಿಸಿತು. ಇದರ ಪರಿಣಾಮವಾಗಿ, ಅಂದಿನ ರಾಷ್ಟ್ರಪತಿ ಕೆ.ಆರ್‌. ನಾರಾಯಣನ್‌ ಅವರು, ಒಂಬತ್ತು ಪ್ರಶ್ನೆಗಳ ಕುರಿತು ಉತ್ತರ ಕಂಡು­ಕೊಳ್ಳು­ವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು.
‘ಅಡ್ವೊಕೇಟ್ಸ್‌ ಆನ್‌ ರೆಕಾರ್ಡ್‌ ...’ ಪ್ರಕರಣ­ದಲ್ಲಿ ನೀಡಿದ ತೀರ್ಪನ್ನು ಸಮರ್ಥಿಸಿಕೊಂಡ ಸುಪ್ರೀಂ ಕೋರ್ಟ್‌ ನೇಮಕಾತಿ ಪ್ರಕ್ರಿಯೆಯಲ್ಲಿ ಸಣ್ಣ ಪ್ರಮಾಣದ ಬದಲಾವಣೆ ತಂದಿತು. ನೇಮ­ಕಾತಿ ಶಿಫಾರಸು ಮಾಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ­ಯವರು, ತಮ್ಮ  ನಾಲ್ವರು ಹಿರಿಯ ಸಹೋ­ದ್ಯೋಗಿ ನ್ಯಾಯಮೂರ್ತಿಗಳ ಜೊತೆ ಸಮಾ­ಲೋಚನೆ ನಡೆಸಬೇಕು ಎಂದು ಹೇಳಿತು. ಸುಪ್ರೀಂ ಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ ಸಂದರ್ಭ­ದಲ್ಲಿ ಸಿಜೆಐ ಅವರು ನಾಲ್ವರು ಹಿರಿಯ ಸಹೋದ್ಯೋಗಿಗಳ ಜೊತೆ ಸಮಾಲೋಚಿಸುವ ಪದ್ಧತಿ ಅಂದಿನಿಂದ ಜಾರಿಯಲ್ಲಿದೆ.
(ಈ ಲೇಖನ ಪ್ರಜಾವಾಣಿ ದೈನಿಕದಲ್ಲಿ ಆಗಸ್ಟ್ ೨೩ರಂದು ಪ್ರಕಟವಾಗಿದೆ.)

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರು ನ

Remember, we have sisters at home…

He was a married man of 30 and had two kids. What’s more, he had a loving spouse who loved him more than anybody could love! He was workin g in a sales promoting company where he, for the second time, fell in love with a charming lady. She was his colleague of 25 and single who loved him in spite of knowing his marital status. Suddenly one day he decided to marry his girlfriend and hence divorced his wife. His new wife didn’t had to wait long to witness his ugly face. She had to face many irking words daily. He used to beat her daily and force himself on her whenever she refused to respond to his sexual urges. She was actually raped by the same man whom, she thought, she loved! The above story is not one of Ekta Kapoor’s ‘K’ series, but is the story of hundreds of Indian women. Now imagine a married woman trying to marry for the second time when her husband is still alive! Imagine a mother of two kids falling in love with a man younger to her or at least imagine a widow expressing her