ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಇತಿಹಾಸ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಇತಿಹಾಸದ ಬಗ್ಗೆ ನಮ್ಮ ಹರಟೆ

ಮೊನ್ನೆ ವೈಯುಕ್ತಿಕ ಕಾರಣಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಹೋಗಿದ್ದೆ. ಹಲವಾರು ಐತಿಹಾಸಿಕ ಸ್ಥಳಗಳನ್ನು ತನ್ನ ಒಡಲೊಳಗೆ ಹುದುಗಿಸಿಕೊಂಡಿರುವ ಊರು ಶಿರಸಿ. ಕದಂಬರಾಳಿದ ಇತಿಹಾಸ ಪ್ರಸಿದ್ಧ ಬನವಾಸಿ, ಅರಸಪ್ಪ ನಾಯಕನ ಸೋದೆ (ಅಥವಾ ಸೋಂದಾ)ಯಂತಹ ಐತಿಹಾಸಿಕ ಪ್ರದೇಶಗಳಿರುವುದು ಶಿರಸಿ ತಾಲೂಕಿನಲ್ಲಿ. ಪಶ್ಚಿಮ ಘಟ್ಟಗಳ ಬೆಟ್ಟವೊಂದರ 'ಶಿರ' ಭಾಗದಲ್ಲಿ ಈ ಪಟ್ಟಣ ಬೆಳೆದಿರುವುದರಿಂದಲೇ ಇದಕ್ಕೆ 'ಶಿರಸಿ' ಎಂಬ ಹೆಸರು ಬಂತು. ಹಾಗೆ ಶಿರಸಿ ತಾಲೂಕಿನ ಸೋಂದಾ ಗ್ರಾಮಕ್ಕೆ ಹೋಗಿದ್ದಾಗ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪುರಾತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿ ಈಗ ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿರುವ ನನ್ನ ಯುವ ಮಿತ್ರರೊಬ್ಬರನ್ನು ಭೇಟಿಯಾಗುವ ಅವಕಾಶವೂ ಸಿಕ್ಕಿತ್ತು. ಹಾಗೇ ಅವರ ಜೊತೆ ಅದು-ಇದು ಅಂತ ಮಾತನಾಡುತ್ತಿದ್ದಾಗ ನಮ್ಮ ಮಾತುಕತೆ ನಿಧಾನವಾಗಿ ಇತಿಹಾಸವನ್ನು ಶಾಸ್ತ್ರೀಯವಾಗಿ ಓದುವುದರ ಅಗತ್ಯತೆಯ ಬಗ್ಗೆ ಹೊರಳಿತು. ಪ್ರಾಥಮಿಕ ಶಾಲೆಗಳ ಇತಿಹಾಸ ಪಠ್ಯಪುಸ್ತಕಗಳು, ಅವುಗಳಲ್ಲಿ ಬರುವ ಯುದ್ಧ ವಿವರಣೆಗಳು, ರಾಜರ ಜೀವನ ವಿಧಾನಗಳ ಬಗ್ಗೆಯೂ ನಾವು ಮಾತನಾಡಿದೆವು. ಇತಿಹಾಸವನ್ನು ಓದಲು ಇವತ್ತಿನ ಯುವ ಸಮುದಾಯ ತೋರಿಸುತ್ತಿರುವ ನಿರಾಸಕ್ತಿಯ ಬಗ್ಗೆ ನಮ್ಮಲ್ಲಿ ನಡೆದ ಮಾತುಕತೆಯ ಸಾರವನ್ನು ನಿಮಗೂ ಉಪಯೋಗವಾಗಬಹುದು ಎಂಬ ಕಾರಣದಿಂದ ಇಲ್ಲಿ ಬರೆದಿದ್ದೇನೆ. ಈ ಬರಹದಲ್ಲಿ 'ಇತಿಹಾಸ ಪಠ್ಯಪುಸ್ತಕಗಳು' ಎ...

Merchant of death?

It is, by now, a well known fact to the nation that the remark of Sonia Gandhi of the Congress party calling Modi “the merchant of death” during the campaign for Gujarat assembly elections acted as catalyst in favour of the Bharatiya Janata Party which eventually led to the triumphant victory of the latter in the elections. Well, that is not the core issue of this article, but truly the remark of Sonia Gandhi on Modi will be taken into account in the later part of this article. Indira Gandhi, the former Prime Minister of India ordered for a military expedition on Golden Temple of Amritsar which is the most sacred/holy place for the Sikhs. The military operation which targeted the Sikh terrorists who were sheltered in the Golden Temple under the leadership of Jarneil Singh Bhindranwale was aimed at eliminating the Sikh militancy from India and this military operation had been named “Operation Blue Star”. Indira Gandhi, in spite of aware of the fact that her life was under threat, dared ...

'ಶ್ರೀಮಂತಿಕೆಯನ್ನು ಬಿಡಬಲ್ಲೆವು, ಆದರೆ ಸ್ವಾತಂತ್ರವನ್ನಲ್ಲ' ಎಂದ ಧೀಮಂತನ ಕುರಿತು...

ಮೇ ೨೭, ೧೯೬೪ ರಂದು ಭಾರತದ ಪ್ರಧಾನಿಯಾಗಿದ್ದ ಪಂಡಿತ್ ಜವಾಹರಲಾಲ್ ನೆಹರೂ ತೀರಿಕೊಂಡಾಗ ದೇಶವಾಸಿಗಳೆಲ್ಲರೂ ಕೇಳುತ್ತಿದ್ದ ಪ್ರಶ್ನೆ ಒಂದೇ: 'ನೆಹರೂ ನಂತರ ಭಾರತದ ನಾಯಕ ಯಾರು?' ನಿಜ, ನೆಹರೂ ನಂತರ ಭಾರತದ ರಾಜಕೀಯ ವಲಯದಲ್ಲಿ ಅಂತಹ ಒಂದು ನಿರ್ವಾತ ಸ್ಥಿತಿ ನಿರ್ಮಾಣವಾಗಿತ್ತು. ನೆಹರೂ ಪ್ರಧಾನಿಯಾಗಿದ್ದಷ್ಟು ದಿನ ತಮ್ಮ ನಂತರ ದೇಶದ ಚುಕ್ಕಾಣಿ ಹಿಡಿಯಬೇಕಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿರಲಿಲ್ಲ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಹಿರಿಯ ನಾಯಕರಿಗೆ ಕೂಡ ನೆಹರೂ ಉತ್ತರಾಧಿಕಾರಿಯಾಗಿ ಯಾರನ್ನು ನೇಮಕ ಮಾಡಬೇಕು ಎಂಬುದು ತೋಚಲಿಲ್ಲ. ಆಗ ಮೂರಾರ್ಜಿ ದೇಸಾಯವರ ಹೆಸರು ಕೇಳಿಬಂತಾದರೂ, ದೇಸಾಯವರಿಗೆ ಬಹುಪಾಲು ಕಾಂಗ್ರೆಸ್ ನಾಯಕರು ಒಲವು ವ್ಯಕ್ತಪಡಿಸಲಿಲ್ಲ. ನಂತರ ಕೊನೆ ಕ್ಷಣದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ನೆಹರೂ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಶಾಸ್ತ್ರಿ ಯವರು ಮೂಲತಃ ಸಮಾಜವಾದಿಯಾಗಿದ್ದು, ಸ್ವಾತಂತ್ರ ಪೂರ್ವದಿಂದಲೂ ಕಾಂಗ್ರೆಸ್‌ಗೆ ನಿಷ್ಠರಾಗಿದ್ದರಿಂದ ಅವರ ಆಯ್ಕೆಗೆ ಅಷ್ಟಾಗಿ ವಿರೋಧ ಬರಲಿಲ್ಲ. ಜೂನ್ ೧೧, ೧೯೬೪ರಂದು ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಶಾಸ್ತ್ರಿ, ಪ್ರಧಾನಿ ಹುದ್ದೆಂದ ಮಾಡಿದ ಪ್ರಥಮ ಭಾಷಣದಲ್ಲಿ ತಮ್ಮ ಕಾರ್ಯ-ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದರು. "ಪ್ರತಿಯೊಂದು ದೇಶವೂ ತನ್ನ ಜೀವಿತಾವಧಿಯಲ್ಲಿ ಎರಡು ದಾರಿಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾದಂತಹ ಸಂದರ್ಭವನ್ನು ಎದ...