ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಪತ್ರ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಒಂದು ಖಾಸಗಿ ಪತ್ರ

ಅರವಿಂದ ಚೊಕ್ಕಾಡಿಯವರು ಮೂಡುಬಿದಿರೆಯಲ್ಲಿ ವಾಸಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ರಾಜಧಾನಿಯಂತಿರುವ ಮೂಡುಬಿದಿರೆಯಲ್ಲಿ ಇದ್ದುಕೊಂಡು ಇವರಷ್ಟು ಬರೆಯುತ್ತಿರುವವರು ಬಹುಷಃ ಮತ್ತಾರೂ ಇರಲಿಕ್ಕಿಲ್ಲ. ಚೊಕ್ಕಾಡಿಯವರು ನನ್ನಂತಹ ಸಾಮಾನ್ಯ ಓದುಗನೊಬ್ಬ ಒಂದು ವಾರಕ್ಕೆ ಓದಬಹುದಾದಷ್ಟನ್ನು ಒಂದು ವಾರದಲ್ಲಿ ತಾವು ಖುದ್ದು ಬರೆಯುತ್ತಾರೆ. ಅವರ ಓದಿನ ಮತ್ತು ಅರಿವಿನ ವ್ಯಾಪ್ತಿ ಅಷ್ಟಿದೆ. ಅದಿರಲಿ, ಈ ಬರಹದ ವಿಷಯ ಬೇರೆಯೇ ಇದೆ. ಪ್ರಜಾವಾಣಿ ಪತ್ರಿಕೆ ಕನ್ನಡ ಕರಾವಳಿಯಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆಯೇ ತನ್ನ ಆವೃತ್ತಿಯನ್ನು ಆರಂಭಿಸಿದೆ. ೧೯೪೮ರಲ್ಲೇ ಆರಂಭವಾದ ಪ್ರಜಾವಾಣಿ ಕರಾವಳಿಯಲ್ಲಿ ಸ್ವತಂತ್ರ ಆವೃತ್ತಿಯನ್ನು ಆರಂಭಿಸಿದ್ದು ಸ್ವಲ್ಪ ತಡವಾಯಿತು ಅಂತಲೇ ಹೇಳಬಹುದು. ಹಾಗೆ ತಡವಾಗಿಯಾದರೂ ತನ್ನ ಆವೃತ್ತಿಯನ್ನು ಕರಾವಳಿಯಲ್ಲಿ ಆರಂಭಿಸಿದ ಪ್ರಜಾವಾಣಿ ತನ್ನ ಓದುಗರಿಗೆ ಕಳೆದ ಒಂದೂವರೆ ವರ್ಷಗಳಿಂದ ಕರಾವಳಿಯ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆಂದೇ ಮೀಸಲಾದ ’ಕರಾವಳಿ’ ಎಂಬ ಸುದ್ದಿ ಪುರವಣಿಯೊಂದ ವಾರದಲ್ಲಿ ಆರು ದಿನ ಕೊಡುತ್ತಿದೆ. ನಾಲ್ಕು ಪುಟದ ಈ ಪುರವಣಿಯಲ್ಲಿ ಕಡಲ ತಡಿಯ ಸಮೃದ್ಧ ಸುದ್ದಿ, ಸುದ್ದಿ ವಿಶ್ಲೇಷಣೆ ಇರುತ್ತದೆ. ಒಟ್ಟಿನಲ್ಲಿ ಓದಲು ಖುಷಿಕೊಡುವ ದೈನಿಕ ಪುರವಣಿ ಇದು. ಇದೇ ಪುರವಣಿಯಲ್ಲಿ ಪ್ರತಿ ಬುಧವಾರ ಅರವಿಂದ ಚೊಕ್ಕಾಡಿಯವರು ’ತೀರದ ತಲ್ಲಣ’ ಎಂಬ ಅಂಕಣವೊಂದನ್ನು ಕಳೆದೊಂದು...

ಸಾಹಿತ್ಯ ಎನ್ನುವುದು ಆತ್ಮ ಶುದ್ಧಿಯ ಸಾಧನ, ತಿಳ್ಕೊ!

(ಪರೀಕ್ಷೆ, ತಿರುಗಾಟ, ಅನಾರೋಗ್ಯ... ಹೀಗೆ ಹಲವಾರು ಕಾರಣಗಳಿಂದ ಬ್ಲಾಗಿನಲ್ಲಿ ಹಲವು ದಿನಗಳ ನಂತರ ಅಕ್ಷರಗಳನ್ನು ಕಟ್ಟುತ್ತಿದ್ದೇನೆ. ಇದೇನೂ ಲೇಖನವಲ್ಲ. ಸುಮ್ಮನೆ ಕುಳಿತುಕೊಂಡು ಬರೆದ - ಯಾರನ್ನೂ ನೇರವಾಗಿ ಉದ್ದೇಶಿಸಿರದ - ಒಂದು ಪುಟ್ಟ ಪತ್ರ. ಹೊಸ ಬರಹದೊಂದಿಗೆ ಮತ್ತೆ ಕೆಲವೇ ದಿನಗಳಲ್ಲಿ ಭೇಟಿಯಾಗೋಣ.) ಆತ್ಮೀಯ ಸ್ನೇಹಿತೆ... ಬರಹವನ್ನು ಮುಂದುವರೆಸುವದೋ ಬೇಡವೋ ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ನೀನು ನನಗೆ ಬರೆದ ಪತ್ರ ಓದಿದೆ. ಆ ಪತ್ರವನ್ನೇ ನಿನ್ನ ಬ್ಲಾಗಿನಲ್ಲಿ ಹಾಕಿದ್ದರೆ ಒಂದು ಒಳ್ಳೆಯ ಲೇಖನ ಆಗುತ್ತಿತ್ತು. ನಾನು ನಿನಗೆ support ಮಾಡ್ತಿ ಅಂತ ಬರೆದಿದ್ದೀಯಾ. ಧನ್ಯವಾದ ನೆನಪಿಟ್ಟುಕೊಂಡದ್ದಕ್ಕೆ! ಅದಿರಲಿ. ಒಂದು ವಿಷಯ ನೆನಪಿರಲಿ. ಯಾರೊಬ್ಬರ ಬರಹವೂ ಪರಿಪೂರ್ಣ ಅಲ್ಲ. ಪರಿಪಕ್ವವೂ ಅಲ್ಲ. ನನ್ನ ಬರಹ ಪರಿಪಕ್ವ ಅಂತ ಇವತ್ತಿನವರೆಗೆ ಯಾರೂ ಘೋಷಿಸಿಕೊಂಡಿಲ್ಲ. ಹಾಗೊಮ್ಮೆ ಯಾರಾದರೂ ಘೋಷಿಸಿಕೊಂಡರೆ ಅದು ಅಹಂಕಾರವಷ್ಟೆ. ನೀನು ಲಂಕೇಶ್, ಅಡಿಗರ ಉದಾಹರಣೆ ಕೊಟ್ಟಿದ್ದೀಯಾ. ಇದರರ್ಥ ನೀನು ಅವರ ಬರಹ ಓದುತ್ತಿದ್ದೀಯಾ ಎಂದಾಯಿತು. ಬಹಳ ಒಳ್ಳೆಯದು. ಅವರ ಬರಹಗಳಿಗೆ ದೊಡ್ಡ ಪ್ರಮಾಣದ ಓದುಗರಿದ್ದಾರೆ. ಹಾಗೆಯೇ ಲಂಕೇಶರ ಬರಹಗಳನ್ನು ಟೀಕಿಸುವ ಒಂದು ಬಣವೇ ಇದೆ. ಅಡಿಗರ ಬರಹವನ್ನೂ ಹಲವು ಮಂದಿ ಪ್ರಶ್ನಿಸಿದ್ದಾರೆ. ಇವರಿಬ್ಬರೇ ಅಲ್ಲ ಜಗತ್ತಿನ ಯಾವ ಬರಹಗಾರನ ಬರಹವೂ ಪ್ರಶ್ನಾತೀತವಲ್ಲ. ನನ್ನದು-ನಿನ್ನದೂ ಕೂಡ. ನೀನು ಬರೆದದ್ದನ್ನು ಹತ್ತು...