ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಒಂದು ಖಾಸಗಿ ಪತ್ರ

ಅರವಿಂದ ಚೊಕ್ಕಾಡಿಯವರು ಮೂಡುಬಿದಿರೆಯಲ್ಲಿ ವಾಸಿಸುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ರಾಜಧಾನಿಯಂತಿರುವ ಮೂಡುಬಿದಿರೆಯಲ್ಲಿ ಇದ್ದುಕೊಂಡು ಇವರಷ್ಟು ಬರೆಯುತ್ತಿರುವವರು ಬಹುಷಃ ಮತ್ತಾರೂ ಇರಲಿಕ್ಕಿಲ್ಲ. ಚೊಕ್ಕಾಡಿಯವರು ನನ್ನಂತಹ ಸಾಮಾನ್ಯ ಓದುಗನೊಬ್ಬ ಒಂದು ವಾರಕ್ಕೆ ಓದಬಹುದಾದಷ್ಟನ್ನು ಒಂದು ವಾರದಲ್ಲಿ ತಾವು ಖುದ್ದು ಬರೆಯುತ್ತಾರೆ. ಅವರ ಓದಿನ ಮತ್ತು ಅರಿವಿನ ವ್ಯಾಪ್ತಿ ಅಷ್ಟಿದೆ. ಅದಿರಲಿ, ಈ ಬರಹದ ವಿಷಯ ಬೇರೆಯೇ ಇದೆ. ಪ್ರಜಾವಾಣಿ ಪತ್ರಿಕೆ ಕನ್ನಡ ಕರಾವಳಿಯಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆಯೇ ತನ್ನ ಆವೃತ್ತಿಯನ್ನು ಆರಂಭಿಸಿದೆ. ೧೯೪೮ರಲ್ಲೇ ಆರಂಭವಾದ ಪ್ರಜಾವಾಣಿ ಕರಾವಳಿಯಲ್ಲಿ ಸ್ವತಂತ್ರ ಆವೃತ್ತಿಯನ್ನು ಆರಂಭಿಸಿದ್ದು ಸ್ವಲ್ಪ ತಡವಾಯಿತು ಅಂತಲೇ ಹೇಳಬಹುದು. ಹಾಗೆ ತಡವಾಗಿಯಾದರೂ ತನ್ನ ಆವೃತ್ತಿಯನ್ನು ಕರಾವಳಿಯಲ್ಲಿ ಆರಂಭಿಸಿದ ಪ್ರಜಾವಾಣಿ ತನ್ನ ಓದುಗರಿಗೆ ಕಳೆದ ಒಂದೂವರೆ ವರ್ಷಗಳಿಂದ ಕರಾವಳಿಯ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆಂದೇ ಮೀಸಲಾದ ’ಕರಾವಳಿ’ ಎಂಬ ಸುದ್ದಿ ಪುರವಣಿಯೊಂದ ವಾರದಲ್ಲಿ ಆರು ದಿನ ಕೊಡುತ್ತಿದೆ. ನಾಲ್ಕು ಪುಟದ ಈ ಪುರವಣಿಯಲ್ಲಿ ಕಡಲ ತಡಿಯ ಸಮೃದ್ಧ ಸುದ್ದಿ, ಸುದ್ದಿ ವಿಶ್ಲೇಷಣೆ ಇರುತ್ತದೆ. ಒಟ್ಟಿನಲ್ಲಿ ಓದಲು ಖುಷಿಕೊಡುವ ದೈನಿಕ ಪುರವಣಿ ಇದು. ಇದೇ ಪುರವಣಿಯಲ್ಲಿ ಪ್ರತಿ ಬುಧವಾರ ಅರವಿಂದ ಚೊಕ್ಕಾಡಿಯವರು ’ತೀರದ ತಲ್ಲಣ’ ಎಂಬ ಅಂಕಣವೊಂದನ್ನು ಕಳೆದೊಂದು

ಬಿಜೆಪಿ-ಕಾಂಗ್ರೆಸ್ ಜುಗಲ್‌ಬಂದಿ?!

ಭಾರತದ ರಾಜಕಾರಣಿಗಳೆಂದರೆ ಜಗತ್ತಿನ ಶ್ರೇಷ್ಠ ಜಾದೂಗಾರರಿದ್ದಂತೆ. ಅವರ ಮುಂದೆ ಹೌದಿನಿ ಜಾದೂಗಾರರೂ ನಾಚಬೇಕು ಅಂಥ ಪ್ರತಿಭೆ ನಮ್ಮ ರಾಜಕಾರಣಿಗಳಿಗಿದೆ. ರಾಜಕಾರಣಿಗಳು ನಿನ್ನೆ ಒಂದು ಹೇಳಿಕೆ ಕೊಡುತ್ತಾರೆ, ಇವತ್ತು ಹಾಗೆ ಹೇಳಿಯೇ ಇಲ್ಲ ಎಂದು ರಾಗ ತೆಗೆಯುತ್ತಾರೆ. ಜನರನ್ನು ನಂಬಿಸುತ್ತಾರೆ. ಜನರಿಗೆ ಹಣ-ಹೆಂಡ ಹಂಚುತ್ತಾರೆ. ಆದರೂ ವೇದಿಕೆಗಳಲ್ಲಿ ಮರ್ಯಾದಾ ಪುರುಷೋತ್ತಮರಂತೆ ಕುಳಿತುಕೊಳ್ಳುತ್ತಾರೆ. ಜನ ಕೂಡ ಅವರನ್ನು ನಂಬುತ್ತಾರೆ. ತಾವೇ ಕೋಮುಗಲಭೆಗಳಿಗೆ ಪ್ರಚೋದನೆ ನೀಡುತ್ತಾರೆ. ನಾಲ್ಕು ಜನ ಪ್ರಾಣ ಕಳೆದುಕೊಂಡಾಗ ಇದೇ ರಾಜಕಾರಣಿಗಳು ಶಾಂತಿಸಭೆ ನಡೆಸುತ್ತಾರೆ. ಸಮಯ ಸಿಕ್ಕಾಗೆಲ್ಲ ಅದೇನೋ ತತ್ವ, ಸಿದ್ಧಾಂತ ಎಂಬ ಅರ್ಥವಾಗದ ವಿಚಾರಗಳ ಬಗ್ಗೆ ಬಹಳ ಪ್ರಬುದ್ಧವಾಗಿ ಮಾತನಾಡುತ್ತಾರೆ. ಇವತ್ತು ಕಾಂಗ್ರೆಸ್ಸಿಗೆ ಬೆಂಬಲ ಕೊಟ್ಟವರು ನಾಳೆ ಬಿಜೆಪಿಯ ಜತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾಕೆ ಹೀಗೆ ಅಂತ ಕೇಳಿದರೆ ಭಯೋತ್ಪಾದನೆಯನ್ನು ಹತ್ತಿಕ್ಕಲು ಬಿಜೆಪಿಯ ಜತೆ ಸೇರಿದ್ದೇವೆ ಎಂದು ಹೇಳುತ್ತಾರೆ. ನಾಳೆ ಮತ್ತೆ ಕಾಂಗ್ರೆಸ್ಸಿನ ಜತೆ ಮಂಚವೇರುತ್ತಾರೆ. ಕಾರಣ ಕೇಳಿದರೆ ಕೋಮುವಾದಿ ಶಕ್ತಿಗಳನ್ನು ದೂರವಿಡಲು ಹೀಗೆ ಮಾಡಿದ್ದೇವೆ ಎಂದು ಜನರ ತಲೆಗೆ ಎಣ್ಣೆ ಸವರುತ್ತಾರೆ. ಇವತ್ತು ಬಿಜೆಪಿಯಲ್ಲಿದ್ದು ನಾಳೆ ಕಾಂಗ್ರೆಸ್ಸಿಗೆ ಸೇರಬೇಕಾಗಿರುವ ರಾಜಕಾರಣಿಗಳು ಬಿಜೆಪಿಯ ಕೋಮುವಾದಿ ಅಜೆಂಡಾದಿಂದಾಗಿ ದೇಶ ದುರ್ಬಲವಾಗುತ್ತಿದೆ. ಹಾಗಾಗಿ ಜಾತ್ಯಾತೀತ ಶಕ್ತಿಗಳನ