ವಿಷಯಕ್ಕೆ ಹೋಗಿ

ದೀನದಯಾಳರ ನಿರಹಂಕಾರ

ಅದು ೧೯೬೦ರ ದಶಕ. ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾಗಿದ್ದ ಲಾಲ್ ಕೃಷ್ಣ ಆಡ್ವಾಣಿಯವರು ಭಾರತೀಯ ಜನ ಸಂಘದ ಕೆಲವು ಜವಾಬ್ದಾರಿಗಳನ್ನೂ ವಹಿಸಿಕೊಂಡಿದ್ದರು. ಹಾಗೆಯೇ ಪಕ್ಷದ ಮತ್ತು ಸಂಘದ ಕೆಲ ಹಿರಿಯರ ಸೂಚನೆಯ ಮೇರೆಗೆ ೧೯೬೦ರಲ್ಲಿ ’ಆರ್ಗನೈಸರ್’ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಕಾಲ ಅದು.
ಆಡ್ವಾಣಿಯವರಿಗೆ ಜನಸಂಘದ ಮಾರ್ಗದರ್ಶಕರಲ್ಲೊಬ್ಬರಾಗಿದ್ದ, ಸಂತಸದೃಶ ಜೀವನ ನಡೆಸುತ್ತಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರೊಂದಿಗೆ ಆತ್ಮೀಯ ಸಂಬಂಧವಿತ್ತು. ತಮ್ಮ ಆತ್ಮಕಥೆಯಲ್ಲಿ ಆಡ್ವಾಣಿ ಪಂಡಿತ ದೀನದಯಾಳ ಉಪಾಧ್ಯಾಯರ ಬಗ್ಗೆ ಹೀಗೆ ಬರೆದಿದ್ದಾರೆ:
"ಅವರು ತಮ್ಮ ಬಗ್ಗೆ ಮಾತಾಡುವುದನ್ನು ಮುಜುಗರ ಎಂದು ತಿಳಿದಿದ್ದರು. ಅವರು ಹೇಳಿದ್ದನ್ನು ನಡೆಯಲ್ಲಿ ತೋರಿಸಿದರು. ಅವರ ನಾಯಕತ್ವದ ಬೇರುಗಳಿದ್ದದ್ದೇ ಎಲ್ಲರನ್ನು ಅಪ್ಪಿಕೊಳ್ಳುವ ದಾರ್ಶನಿಕತೆಯಲ್ಲಿ. ಅವರು ಮಾನವೀಯತೆಯ ಸಾಕಾರಮೂರ್ತಿ. ಅಧಿಕಾರದ ಬಗ್ಗೆ ನಿಕೃಷ್ಟತೆ ಇದ್ದ ರಾಜಕಾರಣಿ ಅವರಾಗಿದ್ದರು. ಅವರೇ ಪಂಡಿತ ದೀನದಯಾಳ್‌ಜೀ"
ಉಪಾಧ್ಯಾಯರೊಂದಿಗೆ ತಮಗಿದ್ದ ಆತ್ಮೀಯತೆಯನ್ನು ಬಳಸಿಕೊಂಡು ಆಡ್ವಾಣಿಯವರು ಒಮ್ಮೆ ಅವರಲ್ಲಿ ಆರ್ಗನೈಸರ್ ಪತ್ರಿಕೆಗೆ ಒಂದು ಅಂಕಣವನ್ನು ಬರೆಯಲಾರಂಭಿಸುವಂತೆ ಕೇಳಿಕೊಂಡರು.
ಆಡ್ವಾಣಿಯವರ ಒತ್ತಾಯದ ಮೇರೆಗೆ ಉಪಾಧ್ಯಾಯರು ’ರಾಜಕೀಯ ಡೈರಿ’ ಎಂಬ ಅಂಕಣವನ್ನು ಆರ್ಗನೈಸರ್‌ಗೆ ಬರೆಯಲಾರಂಭಿಸಿದರು. ಆಯಾ ವಾರದ ವಿವಿಧ ರಾಜಕೀಯ ವಿದ್ಯಮಾನಗಳನ್ನು ಉಪಾಧ್ಯಾಯರು ತಮ್ಮದೇ ಆದ ದೃಷ್ಟಿಕೋನದಿಂದ ಆ ಅಂಕಣದಲ್ಲಿ ವಿಮರ್ಶಿಸುತ್ತಿದ್ದರು. ಅವರ ಅನನ್ಯ ಒಳನೋಟಗಳ ಕಾರಣ ಆ ಅಂಕಣ ಬಹುಬೇಗ ಜನಪ್ರಿಯವಾಯಿತು. ಮುಂದೆ ಇದೇ ಅಂಕಣ ಬರಹಗಳ ಸಂಕಲನ ’ರಾಜಕೀಯ ಡೈರಿ’ ಎಂಬ ಹೆಸರಿನಲ್ಲಿಯೇ ಪುಸ್ತಕ ರೂಪದಲ್ಲಿ ಹೊರಬಂತು.
ಇದೆಲ್ಲವನ್ನು ಗಮನಿಸಿದ ಆಡ್ವಾಣಿ, ಉಪಾಧ್ಯಾಯರಲ್ಲಿ ತಮ್ಮ ಅಪಾರ ಅನುಭವ, ಪ್ರವಾಸ, ಒಳನೋಟಗಳಿಂದ ಕೂಡಿದ ವೈಯುಕ್ತಿಕ ಸ್ಪರ್ಷವಿರುವ ಅಂಕಣವೊಂದನ್ನು ಬರೆಯಿರಿ ಎಂದು ಕೇಳಿಕೊಂಡರು. ಆದರೆ ಉಪಾಧ್ಯಾಯರು ಇದಕ್ಕೆ ಖಡಾಖಂಡಿತವಾಗಿ ಒಲ್ಲೆ ಎಂದರು! ಕಾರಣ ಕೇಳಿದಾಗ: "ಈ ರೀತಿಯ ಅಂಕಣ ಆರಂಭಿಸಿದರೆ ಅನಗತ್ಯವಾಗಿ ’ನಾನು’ ಎಂಬ ಪದವನ್ನು ಅಂಕಣದುದ್ದಕ್ಕೂ ಉಲ್ಲೇಖಿಸಬೇಕಾದ ಪ್ರಮೇಯ ಬರುತ್ತದೆ. ನನಗದು ಇಷ್ಟವಿಲ್ಲದ ಸಂಗತಿ ಎಂದು ಹೇಳಿದರು!"
ಆದರೂ ಆಡ್ವಾಣಿಯವರು ನಿಮ್ಮ ಬರಹ ಓದುಗರಿಗೆ ಇಷ್ಟವಾಗುತ್ತದೆ ಎಂದು ತುಂಬ ಒತ್ತಾಯ ಮಾಡಿದಾಗ ಉಪಾಧ್ಯಾಯರು ಬರೆಯಲು ಒಪ್ಪಿದರು. ಆದರೆ ಎರಡು ಅಂಕಣ ಬರೆದು, ಅದು ಪ್ರಕಟವಾದ ನಂತರ ಆಡ್ವಾಣಿಯವರಲ್ಲಿಗೆ ಬಂದ ಉಪಾಧ್ಯಾಯರು ನಾನು ಇನ್ನು ಈ ಅಂಕಣವನ್ನು ಮುಂದುವರೆಸುವುದಿಲ್ಲ ಎಂದುಬಿಟ್ಟರಂತೆ.
"ನಾನು ಯಾವುದೇ ವಿಷಯದ ಬಗ್ಗೆ ಬೇಕಾದರೂ ಬರೆಯುತ್ತೇನೆ. ಆದರೆ ನನ್ನ ಬಗೆಗಲ್ಲ. ಅದು ನನಗೆ ಆಗಿಬರುವುದಿಲ್ಲ" ಎಂದು ಉಪಾಧ್ಯಾಯರು ಕಾರಣ ನೀಡಿದ್ದರು.
ಉಪಾಧ್ಯಾಯರ ಈ ನಿರಹಂಕಾರದ ಮನಸ್ಥಿತಿಗೊಂದು ಪ್ರಣಾಮಗಳು.

ಕಾಮೆಂಟ್‌ಗಳು

Unknown ಹೇಳಿದ್ದಾರೆ…
vinaayak ravare,
haage idda jana iddaru e0du na0buvudu kaShTa Igina jana vannu noDidare !!! !!! nanni0daagi pakSha ide. nanna biTTare yaaru illa ??? ennuva janara madhye !!!!!
Unknown ಹೇಳಿದ್ದಾರೆ…
ಉಪಾಧ್ಯಾಯರ ಈ ನಿರಹಂಕಾರದ ಮನಸ್ಥಿತಿ ಒಳ್ಳೆಯದು ಇದು ಎಷ್ಟು ಜನರಿಗೆ ಇದೆ. ಅಪರೂಪ ಲೇಖನ ಚೆನ್ನಾಗಿದೆ. ನಿನ್ನ ಹೆಸರು ಬದಲಾಗಿದೆ
Unknown ಹೇಳಿದ್ದಾರೆ…
e vattu a 'naane' bjp yannu sarva nasha madtha e dhe alwa? alliya dindayala ruu yelliya endina e deenaru!
joshi karnatakd bjp naykrige e article odlike helthene

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮರೆಯಲಾಗದ ಕಾಮತರು: ಮಾಧವರಾಯರ ಒಂದು ನೆನಪು!

ನಮ್ಮ ತಲೆಮಾರಿನ ಪತ್ರಕರ್ತರು ಕಂಡ 'ಪತ್ರಿಕಾ ರಂಗದ ಭೀಷ್ಮ'ನ ಬಗ್ಗೆ ಬರೆಯಬೇಕು ಅನಿಸುತ್ತಿದೆ. ಆ ಭೀಷ್ಮ ಯಾರು ಎಂಬ ಪ್ರಶ್ನೆ ಬೇಡ - ಅವರು ಮಾಧವ ವಿಠಲ ಕಾಮತ್ (ಎಂ.ವಿ. ಕಾಮತ್) ಅಲ್ಲದೆ ಬೇರೆ ಯಾರೂ ಅಲ್ಲ. ಅವರ ಬಗ್ಗೆಯೇ ಯಾಕೆ ಬರೆಯಬೇಕು ಅನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲ. ಆದರೆ ಎಂಬತ್ತು ವರ್ಷ ವಯಸ್ಸು ದಾಟಿದ ನಂತರವೂ ಎಳೆಯ ಯುವಕನಂತೆ ಕಾಣಿಸುತ್ತಿದ್ದ ಕಾಮತರ ಬಗ್ಗೆ ಬರೆಯಬೇಕು ಎಂದು ಹಲವು ದಿನಗಳಿಂದ ಅಂದುಕೊಳ್ಳುತ್ತಿದ್ದೆ ಎಂಬುದಂತೂ ನಿಜ. ನಾನು ಪದವಿ ವ್ಯಾಸಂಗ ಮಾಡುತ್ತಿದ್ದ ದಿನಗಳು ಅವು. ಒಂದು ದಿನ ದೂರವಾಣಿ ಕರೆ ಮಾಡಿದ ಹರೀಶ್ ಆದೂರು ಅವರು (ಆಗ ಹರೀಶ್ ಅವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು), 'ಈ ವಾರದ ಅಂತ್ಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಸಂಜೆ ಕಾರ್ಯಕ್ರಮ ಇದೆ. ನೀನೂ ಬಾ. ಅಲ್ಲಿ ನಿನಗೆ ನಾಲ್ಕು ಒಳ್ಳೆಯ ಮಾತುಗಳನ್ನು ಕೇಳುವ ಅವಕಾಶ ಸಿಗಬಹುದು' ಎಂದು ಆಹ್ವಾನ ನೀಡಿದರು. 'ಕಾರ್ಯಕ್ರಮದ ಅತಿಥಿ ಯಾರು' ಎಂದು ಪ್ರಶ್ನಿಸಿದೆ. 'ಎಂ.ವಿ. ಕಾಮತರು ಮಾರಾಯಾ' ಎಂದು ಉತ್ತರಿಸಿ ಫೋನ್ ಇಟ್ಟರು. ಶನಿವಾರ ಬಂತು. ಅಂದಿನ ತರಗತಿಗಳು ಮುಗಿದಿದ್ದವು. ಸರಿ, ಕಾಮತರ ಮಾತು ಕೇಳಿಸಿಕೊಳ್ಳುವ ಅವಕಾಶ ತಪ್ಪಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಮೂಡುಬಿದಿರೆ ಬಸ್‌ ಸ್ಟ್ಯಾಂಡ್‌ಗೆ ಹೋಗಿ, ಬೆಳ್ತಂಗಡಿ ಕಡೆ ಹೋಗುವ ಬಸ್ ಹತ್ತಿದೆ. ಜ

ಪತ್ರಿಕೋದ್ಯಮದ ವಿದ್ಯಾರ್ಥಿ ಮಿತ್ರರಿಗೆ...

ನಾನಿನ್ನೂ ಪತ್ರಿಕೋದ್ಯಮದ ವಿದ್ಯಾರ್ಥಿ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇನ್ನೂ ಎರಡು ವರ್ಷ ಕಾಯಬೇಕು. ಪತ್ರಿಕೋದ್ಯಮದ ಜಂಜಡಗಳ ನೇರ ಅನುಭವವಿಲ್ಲ. ಪತ್ರಿಕಾರಂಗದಲ್ಲಿ ಎದುರಿಸಬೇಕಾಗಿರುವ ಸವಾಲುಗಳ ಬಗ್ಗೆ ಕೇಳಿ ಗೊತ್ತೆ ಹೊರತು ಸ್ವಲ್ಪವೂ ಅನುಭವಿಸಿ ಗೊತ್ತಿಲ್ಲ. ಹಾಗಾಗಿ ಈ ಹೊತ್ತಿನಲ್ಲಿ ಇಂಥ ಒಂದು ಲೇಖನವನ್ನು ಬರೆಯುವುದು ಸರಿಯೋ ತಪ್ಪೋ ಎಂಬ ಪ್ರಶ್ನೆ ನನ್ನನ್ನು ಹಲವು ಬಾರಿ ಕಾಡಿದೆ. ಆದರೂ ಈ ವಿಷಯವನ್ನು ನಿಮ್ಮ ಮುಂದೆ ಹೇಳಿಕೊಳ್ಳದಿದ್ದರೆ ಸಮಾಧಾನವಿಲ್ಲ ಅಂತ ಅನಿಸಿದ್ದರಿಂದ "ಬರೆಯಬೇಕು, ಬರೆಯುತ್ತೇನೆ" ಎಂದು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಪತ್ರಿಕೋದ್ಯಮದಲ್ಲಿ ಪದವಿಯನ್ನು ನೀಡುವ ಹಲವಾರು ಕಾಲೇಜುಗಳು ಹುಟ್ಟಿಕೊಳ್ಳುತ್ತಿವೆ. ಹಲವಾರು ಪ್ರತಿಷ್ಠಿತ ಕಾಲೇಜುಗಳು ತಮ್ಮ ಮಾನವಿಕ ವಿಭಾಗದಲ್ಲಿ ಪತ್ರಿಕೋದ್ಯಮವನ್ನೂ ಒಂದು ಆಯ್ಕೆಯ ವಿಷಯವನ್ನಾಗಿ ಸೇರಿಸಿದ್ದಾರೆ. ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರಗಳಂತೆ ಪತ್ರಿಕೋದ್ಯಮವನ್ನೂ ಶಾಸ್ತ್ರೀಯವಾಗಿ ಓದುವ ಅವಕಾಶ ಇಂದಿನ ಯುವಕರಿಗೆ ಇದೆ. ಪತ್ರಿಕೋದ್ಯಮವನ್ನು ಇಷ್ಟೊಂದು ಶಾಸ್ತ್ರೀಯವಾಗಿ ಓದಿದ್ದರೂ ನಾವು ಕೆಲವೊಮ್ಮೆ ವರ್ತಿಸುತ್ತಿರುವ ರೀತಿ ಸ್ವಲ್ಪ ಬೇಸರ ಮೂಡಿಸುತ್ತಿದೆ. ಮೊನ್ನೆ ಪತ್ರಿಕೋದ್ಯಮ ಓದುತ್ತಿರುವ ನನ್ನ ಹಳೆಯ ಸ್ನೇಹಿತರೊಬ್ಬರ ಜೊತೆ ಮಾತನಾಡುತ್ತಿದ್ದಾಗ ಭಾರತೀಯ ಮೂಲದ ವಿಶ್ವದ ಶ್ರೇಷ್ಠ ಪತ್ರಿಕೆಯೊಂದರ ಬಗ್ಗೆ ಮಾತು ಬಂತು. ಸುಮಾರು ನ

Remember, we have sisters at home…

He was a married man of 30 and had two kids. What’s more, he had a loving spouse who loved him more than anybody could love! He was workin g in a sales promoting company where he, for the second time, fell in love with a charming lady. She was his colleague of 25 and single who loved him in spite of knowing his marital status. Suddenly one day he decided to marry his girlfriend and hence divorced his wife. His new wife didn’t had to wait long to witness his ugly face. She had to face many irking words daily. He used to beat her daily and force himself on her whenever she refused to respond to his sexual urges. She was actually raped by the same man whom, she thought, she loved! The above story is not one of Ekta Kapoor’s ‘K’ series, but is the story of hundreds of Indian women. Now imagine a married woman trying to marry for the second time when her husband is still alive! Imagine a mother of two kids falling in love with a man younger to her or at least imagine a widow expressing her