ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ದೇಶಪ್ರೇಮದ ಆಯಾಮಗಳು...

ಕನ್ನಡಿಗರ ಪಾಲಿಗೆ ಕುಂಟೆಗೋಡು ವಿಭೂತಿ ಸುಬ್ಬಣ್ಣ ಯಾವತ್ತಿಗೂ ಒಂದು ಅಚ್ಚರಿಯೇ ಸರಿ. ಮೈಸೂರಿನ ಮಾನಸಗಂಗೋತ್ರಿಯಲ್ಲಿ ತಮ್ಮ ಸ್ನಾತಕೋತ್ತರ ಅಧ್ಯಯನ ಮುಗಿಸಿದ ಕೆ. ವಿ. ಸುಬ್ಬಣ್ಣ ಮನಸ್ಸು ಮಾಡಿದ್ದರೆ ನಾಡಿನ ಯಾವುದಾದರೂ ವಿಶ್ವವಿದ್ಯಾಲಯದ ಆಯಕಟ್ಟಿನ ಜಾಗವನ್ನು ಆಕ್ರಮಿಸಿ ಕೂರಬಹುದಿತ್ತು. ಬಹುಷ: ಅವರು ಹಾಗೆ ಮಾಡಿದ್ದರೆ ತಮ್ಮ ನಿವೃತ್ತಿಯ ಅಂಚಿಗೆ ಬರುವ ಹೊತ್ತಿಗೆ ಒಂದಿಷ್ಟು ವಿದೇಶ ಪ್ರವಾಸ, ಒಂದಿಷ್ಟು ಡಾಕ್ಟರೇಟ್ ಡಿಗ್ರಿಗಳನ್ನು ತಮ್ಮ ಮುಡಿಗೇರಿಸಿಕೊಂಡಿರುತ್ತಿದ್ದರು. ಆದರೆ ಸುಬ್ಬಣ್ಣ ಹಾಗೆ ಮಾಡಲಿಲ್ಲ. ತಮ್ಮ ಊರಾದ ಹೆಗ್ಗೋಡಿಗೆ ವಾಪಸಾದ ಸುಬ್ಬಣ್ಣ ಅಲ್ಲಿಯೇ ನೀಲಕಂಠೇಶ್ವರ ನಾಟಕ ಸಂಘವನ್ನು ಕಟ್ಟಿದರು. ಬಹುಷ: ಜಾಗತಿಕ ರಂಗಭೂಮಿಯ ಯಾವ ಗಾಳಿಯೂ ಬೀಸದಿದ್ದ ಹೆಗ್ಗೋಡಿನಲ್ಲಿ ರಂಗಚಟುವಟಿಕೆಗಳನ್ನು ಆರಂಭಿಸಿದರು. ನೋಡನೋಡುತ್ತಿದ್ದ ಹಾಗೆ ನೀನಾಸಂ ಅನ್ನು ಜಗವೇ ಮೆಚ್ಚುವ ರೆಪರ್‍ಟರಿಯನ್ನಾಗಿಸಿದರು. ಕೆ ವಿ ಸುಬ್ಬಣ್ಣ ಕೇವಲ ವ್ಯಕ್ತಿಯಾಗುಳಿಯಲಿಲ್ಲ; ಈ ನಾಡಿನ ಪ್ರಜ್ಞೆಯಾಗಿ ಬೆಳೆದರು. ಕನ್ನಡ ರಂಗಭೂಮಿಯ ’ಗಾಂಧಿ’ಯಾದರು. *** ಕೈಗೆ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಸಂಬಳ ತರುವ ಕೆಲಸ ಬ್ಲಿಟ್ಜ್ ಪತ್ರಿಕೆಯಲ್ಲಿತ್ತು. ಕೆಲ ಕಾಲ ಆ ಕೆಲಸವನ್ನು ಮಾಡಿದ ಪಿ ಸಾಯಿನಾಥ್‌ಗೆ ಅದೇಕೋ ಇದ್ದಕ್ಕಿದ್ದಂತೆ ಆ ಕೆಲಸ ತಮಗೆ ಸರಿಹೊಂದುವುದಿಲ್ಲ ಅಂತ ಅನಿಸಿಬಿಟ್ಟಿತು. ಸರಿ, ತಮ್ಮ ಪೆನ್ನು, ಪುಸ್ತಕ ಹಿಡಿದು ಬ್ಯಾಗ್ ಹೆಗಲಿಗೇರಿಸಿ ಹೊರಟ ಸಾಯಿನ

ಪತ್ರಿಕೋದ್ಯಮವೆಂಬ ಸಮಾಜದ ಸಾಕ್ಷಿಪ್ರಜ್ಞೆ

ದಿ ಏಶಿಯನ್ ಏಜ್ ಮತ್ತು ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅನುಭವ ಇರುವ ಮಂಗಳೂರು ಮೂಲದ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಈಗ ವೃತ್ತಿಪರ ಪತ್ರಿಕೋದ್ಯಮಕ್ಕೆ ವಿದಾಯ ಹೇಳಿ ಹವ್ಯಾಸಿ ಪತ್ರಕರ್ತರಾಗಿದ್ದಾರೆ. ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಎಂಬ ಸಂಘಟನೆಯೊಂದನ್ನು ಹುಟ್ಟುಹಾಕಿಕೊಂಡು ಪರ್ಯಾಯ ಶಿಕ್ಷಣ ವಿಧಾನಗಳ ಅಭಿವೃದ್ಧಿಯ ಬಗ್ಗೆಯೂ ಕೆಲಸ ಮಾಡುತ್ತಿದ್ದಾರೆ. ಇವೆರಡರ ಜೊತೆಗೆ ಆಗಾಗ ಕರಾವಳಿಯ ಪತ್ರಿಕೋದ್ಯಮ ಕಾಲೇಜುಗಳ ವಿದ್ಯಾರ್ಥಿಗಳಿಗೆಂದು ಪ್ರಾಯೋಗಿಕ ಪತ್ರಿಕೋದ್ಯಮ ತರಗತಿಗಳನ್ನೂ ನಡೆಸುತ್ತಿದ್ದಾರೆ. ಒಮ್ಮೆ ಹೀಗೆ ಅವರ ತರಗತಿಯಲ್ಲಿ ಕುಳಿತಿದ್ದಾಗ ಅವರ ಒಂದು ಮಾತು ಥಟ್ಟನೆ ಮನಸ್ಸಿನ ಆಳಕ್ಕೆ ಇಳಿಯಿತು. ಪತ್ರಕರ್ತನಾದವ ಆಶಾವಾದಿಯೂ ಆಗಬೇಕಿಲ್ಲ, ನಿರಾಶಾವಾದಿಯೂ ಆಗಬೇಕಿಲ್ಲ. ಆತ ವಾಸ್ತವವಾದಿಯಾಗಿದ್ದರೆ ಸಾಕು. ಆತ ತನ್ನ ವಯುಕ್ತಿಕ ಬದುಕಿನಲ್ಲಿ ಆಶಾವಾದಿಯಾಗಿರಬಾರದು ಎಂದು ಹೇಳುತ್ತಿಲ್ಲ. ಆದರೆ ಪತ್ರಕರ್ತನ ಕೆಲಸ ನಿರ್ವಹಿಸುತ್ತಿರುವಾಗ ಆತ ಖಂಡಿತವಾಗಿಯೂ ವಾಸ್ತವವಾದಿಯಾಗಿರಬೇಕು. ಪತ್ರಿಕೋದ್ಯಮವನ್ನು ಮತ್ತು ವೈಯುಕ್ತಿಕ ಬದುಕನ್ನು ಒಂದೇ ಎಂದು ತಿಳಿದವರು ವಾಸ್ತವವಾದಿಗಳೇ ಆಗಿರಲಿ. ಅಂಥವರು ಆಶಾವದಿಗಳೋ ಅಥವಾ ನಿರಾಶಾವಾದಿಗಳೋ ಆಗಿರುವುದು ಬೇಡ ಎಂಬುದು ಅವರ ಆ ದಿನದ ಪಾಠದ ಸಾರ. ಅವರ ಮಾತು ಸರಿಯಾಗಿ ಅರ್ಥವಾಗಬೇಕಾದರೆ ಒಂದು ಕಾಲ್ಪನಿಕ ಕಥೆಯನ್ನು ಹೇಳಬೇಕು. ಈ ಕಥೆಯನ್ನು ನನಗೆ ಹೇಳಿದ್ದು ಮೂಡುಬ