ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಏಕರೂಪ ನಾಗರಿಕ ಸಂಹಿತೆ ಎಂಬ ಜಾತ್ಯತೀತ ಬೇಡಿಕೆ

ಏಕರೂಪ ನಾಗರಿಕ ಸಂಹಿತೆಯನ್ನು ದೇಶದಲ್ಲಿ ಜಾರಿಗೆ ತರುವುದು ಸಂವಿಧಾನ ನಿರ್ಮಾತೃಗಳ ಕನಸು , ಆಶಯ . ಸಂವಿಧಾನ ಕರಡು ರಚನಾ ಸಭೆಯಲ್ಲಿ ಡಾ . ಬಿ . ಆರ್ . ಅಂಬೇಡ್ಕರ್ , ಕೆ . ಎಂ . ಮುನ್ಷಿ ಸೇರಿದಂತೆ ಹಲವರು ಆಡಿದ ಮಾತುಗಳು ಇದನ್ನು ದೃಢಪಡಿಸುತ್ತವೆ . ಆದರೆ , ಕರಡು ರಚನಾ ಸಮಿತಿಯ ಎಲ್ಲ ಸದಸ್ಯರಿಂದ ಇದಕ್ಕೆ ಬೆಂಬಲ ಸಿಗಲಿಲ್ಲ . ನಿರ್ದಿಷ್ಟ ವರ್ಗಗಳಿಂದ ವಿರೋಧ ವ್ಯಕ್ತವಾದರೂ , ಸಂವಿಧಾನದ 44 ನೇ ವಿಧಿಯಲ್ಲಿ , ‘ ಸರ್ಕಾರವು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಯತ್ನಿಸಬೇಕು’ ಎಂದು ಹೇಳಲಾಗಿದೆ . ಇಲ್ಲಿ ಒಂದು ವಿಚಾರ ಸ್ಪಷ್ಟ . ಸಮಾನತೆಯನ್ನು ಹೇಳುವ 14 ನೇ ವಿಧಿ , ಧಾರ್ಮಿಕ ಸ್ವಾತಂತ್ರ್ಯವನ್ನು ನೀಡುವ 25 ನೇ ವಿಧಿಯನ್ನು ರಚಿಸಿದ ನಂತರವೇ , ಕರಡು ರಚನಾ ಸಮಿತಿಯು 44 ನೇ ವಿಧಿಯನ್ನು ರೂಪಿಸಿತು . ದೇಶದಲ್ಲಿ ವಿವಿಧ ಧರ್ಮ , ಜಾತಿ , ವರ್ಗಗಳನ್ನು ಪ್ರಭುತ್ವ ಸಮಾನವಾಗಿ ಕಾಣಬೇಕು (12 ನೇ ವಿಧಿ ), ಅವರ ಧಾರ್ಮಿಕ ಸ್ವಾತಂತ್ರ್ಯಕ್ಕೆ ರಕ್ಷಣೆ ನೀಡಬೇಕು (25 ನೇ ವಿಧಿ ) ಎಂದು ಹೇಳುವ ಸಂವಿಧಾನ , ಆಸ್ತಿ– ವಿವಾಹ– ದತ್ತು ಸ್ವೀಕಾರ ಸೇರಿದಂತೆ ವೈಯಕ್ತಿಕ ಕಾನೂನುಗಳ ವ್ಯಾಪ್ತಿಗೆ ಬರುವ ವಿಚಾರಗಳಲ್ಲಿ ಎಲ್ಲರಿಗೂ ಅನ್ವಯವಾಗುವ ಸಮಾನ ಸಂಹಿತೆಯನ್ನು ರೂಪಿಸಬೇಕು ಎಂದಿದೆ . ಅಂದರೆ ಸಮಾನತೆ , ಧಾರ್ಮಿಕ ಸ್ವಾತಂತ್ರ್ಯವನ್ನು ಕಾಯ್ದುಕೊಂಡೇ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಸಾಧ್ಯ ಎಂಬ ನಂಬಿಕೆ ಕ