ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇದು ಸಂವಾದದ ಹೊತ್ತು ಆಗಬೇಕಲ್ಲವೇ?

ನಾವು ಬದುಕುತ್ತಿರುವ ಸಂದರ್ಭವನ್ನು ‘ಫೇಸ್‌ಬುಕ್‌ ಮೂಲಕ ವಿಕಾರಗಳನ್ನು ತೋರಿಸಿಕೊಳ್ಳುವ ಹೊತ್ತು’ ಎಂದು ಕರೆಯಲು ಅಡ್ಡಿಯಿಲ್ಲ ಅನಿಸುತ್ತದೆ. ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುವ ಕೆಲವು ಚರ್ಚೆಗಳ ಮಟ್ಟವನ್ನು ಗಮನಿಸಿದರೆ ನಿಮಗೂ ಹಾಗೆ ಅನಿಸಬಹುದು. ಅದರಲ್ಲೂ ಎಡ–ಬಲ ಪಂಥಗಳ ಚರ್ಚೆಗಳಿಗೆ ತಲೆ ಹಾಕಿದರೆ ಮುಗಿದೇ ಹೋಯಿತು. ಅಲ್ಲಿ ಏನಾಗುತ್ತದೆ ಎಂಬುದು ನಿಮ್ಮೆಲ್ಲರ ಗಮನಕ್ಕೂ ಬಂದಿರಬಹುದು ಎಂಬುದು ನನ್ನ ಭಾವನೆ. ಮೂಡುಬಿದಿರೆಯಲ್ಲಿ ಇದ್ದುಕೊಂಡು, ಮಕ್ಕಳಿಗೆ ಪಾಠ ಹೇಳಿಕೊಡುತ್ತ, ಸಾಹಿತ್ಯ, ಸಮಾಜ, ಅರ್ಥವ್ಯವಸ್ಥೆ ಬಗ್ಗೆ ಮಾತನಾಡುವ, ನಾನು ಅವರ ಮನೆಗೆ ಹೋದಾಗಲೆಲ್ಲ ಒಳ್ಳೆಯ ಎಲೆ ಅಡಿಕೆ ಕೊಡುವ ಅರವಿಂದ ಚೊಕ್ಕಾಡಿಯವರು ಎಡ–ಬಲ ಪಂಥಗಳ ಬಗ್ಗೆ, ಅವೆರಡರ ನಡುವೆ ಸಂವಾದ ಆಗಬೇಕಿರುವ ಅಗತ್ಯದ ಬಗ್ಗೆ ಪುಟ್ಟ ಬರಹ ಬರೆದಿದ್ದಾರೆ. ಆ ಬರಹವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ಅವರ ಬರಹಕ್ಕೆ ನಾನು ಬರೆದ ಪ್ರತಿಕ್ರಿಯೆ ಕೂಡ ಇಲ್ಲಿದೆ. ದಯವಿಟ್ಟು ಎರಡನ್ನೂ ಓದಿ. ನಿಮ್ಮ ಅನಿಸಿಕೆ ತಿಳಿಸಿ. =========== ಚೊಕ್ಕಾಡಿಯವರಿಗೆ ಬರೆದ ಪ್ರತಿಕ್ರಿಯೆ... ಸರ್, ನಿಮ್ಮ ಬರಹ ಓದಿದ ನಂತರ ಹಳೆಯ ಕೆಲವು ಪ್ರಯತ್ನಗಳು ನೆನಪಿಗೆ ಬಂದವು. ಆ ಪ್ರಯತ್ನಗಳು ನಡೆದಿದ್ದ ಹೊತ್ತಿನಲ್ಲಿ ನೀವೂ ಜೊತೆಯಲ್ಲಿ ಇದ್ದಿದ್ದು ಅಥವಾ ನಾವು ನಿಮ್ಮ ಜೊತೆಯಲ್ಲಿ ಇದ್ದಿದ್ದು ನಿಮ್ಮ ನೆನಪಿನಲ್ಲಿ ಇದೆ ಎಂದು ಭಾವಿಸುವೆ. ಎಡಪಂಥೀಯರು ಮತ್ತು ಬಲಪಂಥೀಯರಲ್ಲಿ ಇರುವ, ಸಂವಾದಿ