ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸಾಹಿತ್ಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕನ್ನಡದ ಸಮಸ್ತ ಬರಹಗಾರರಿಗೆ...

ಆದರಪೂರ್ವಕ ನಮನಗಳು. ಕನ್ನಡ ಬರಹಗಾರರು ಅಂತ ನಾನು ಸಂಬೋಧಿಸಿದ್ದು ಪತ್ರಿಕೆ-ನಿಯತಕಾಲಿಕೆಗಳ ಮೂಲಕ, ಬ್ಲಾಗು/ವೆಬ್‌ಸೈಟುಗಳ ಮೂಲಕ, ಪುಸ್ತಕಗಳ ಮೂಲಕ ಕನ್ನಡದಲ್ಲಿ ಬರೆಯುತ್ತಿರುವ ಪ್ರತಿಯೊಬ್ಬ ಹಿರಿಕಿರಿಯ ಬರಹಗಾರರನ್ನು. ಒಂದು ಘಟನೆ ನೆನಪಿಗೆ ಬರುತ್ತಿದೆ. ಕನ್ನಡದ ಹೆಮ್ಮೆಯ ಬರಹಗಾರ ಪೂರ್ಣಚಂದ್ರ ತೇಜಸ್ವಿ ಅವರಿಗೆ ಸಂಬಂಧಿಸಿದ್ದು. ಹೊಸ ಸಹಸ್ರಮಾನವನ್ನು ವಿಭಿನ್ನ ರೀತಿಯಲ್ಲಿ ಸ್ವಾಗತಿಸಲೆಂದು ತೇಜಸ್ವಿ ‘ಮಿಲೆನಿಯಮ್’ ಸರಣಿ ಪುಸ್ತಕಗಳನ್ನು ಬರೆದರಷ್ಟೇ. ವಿಶ್ವದ ಅಸಂಖ್ಯ ಕೌತುಕಗಳನ್ನು, ವಿವಿಧ ನಾಗರೀಕತೆಗಳು ನಡೆಸಿದ ‘ಜೀವನ ಸಂಗ್ರಾಮ’ಗಳನ್ನು, ಪ್ರಪಂಚ ಕಂಡ ಮಹಾಯುದ್ಧಗಳನ್ನು ಕನ್ನಡದ ಮೂಲಕವೇ ಓದುಗರಿಗೆ ಪರಿಚಯಿಸುವ ವಿನೂತನ ಪ್ರಯತ್ನವದು. ಕನ್ನಡ ಪುಸ್ತಕಲೋಕ ಕಂಡ ಬಹಳ ವಿಶಿಷ್ಟ ಕೈಂಕರ್ಯ ತೇಜಸ್ವಿ ಮತ್ತು ಅವರ ಸಂಗಡಿಗರು ಹೊರತಂದ ಮಿಲೆನಿಯಮ್ ಸರಣಿ ಪುಸ್ತಕಗಳು. ತೇಜಸ್ವಿಯವರ ಈ ಪುಸ್ತಕ ಸರಣಿಯ ಪ್ರಕಟಣೆ ಆರಂಭವಾಗುತ್ತಿದ್ದಂತೆಯೇ ಒಂದು ವರ್ಗದಿಂದ ಕೂಗು ಆರಂಭವಾಯಿತು. ‘ತೇಜಸ್ವಿಯವರ ಸೃಜನಶೀಲ ಬರವಣಿಗೆ ಸತ್ತುಹೋಗುತ್ತಿದೆ’ ಎಂದು ಕೆಲವರು ವಾದಿಸತೊಡಗಿದರು. ಆದರೆ ಟೀಕೆಟಿಪ್ಪಣಿಗಳಿಗೆ ಸೊಪ್ಪು ಹಾಕದ ತೇಜಸ್ವಿ ತಮ್ಮ ಕಾಯಕ ಮುಂದುವರೆಸಿದರು; ಮಿಲೆನಿಯಮ್ ಸರಣಿಯ 16 ಪುಸ್ತಕಗಳನ್ನು ಕನ್ನಡಿಗರಿಗೆ ಕೊಟ್ಟರು. ಕನ್ನಡಿಗರಿಗೆ ವಿಶ್ವದರ್ಶನ ಮಾಡಿಸಿದ ಪುಣ್ಯ ಅವರದ್ದು. ಅಂದಹಾಗೆ, ಯಾವುದು ಸೃಜನಶೀಲ ಸಾಹಿತ್...

ಸಾಹಿತ್ಯ ಎನ್ನುವುದು ಆತ್ಮ ಶುದ್ಧಿಯ ಸಾಧನ, ತಿಳ್ಕೊ!

(ಪರೀಕ್ಷೆ, ತಿರುಗಾಟ, ಅನಾರೋಗ್ಯ... ಹೀಗೆ ಹಲವಾರು ಕಾರಣಗಳಿಂದ ಬ್ಲಾಗಿನಲ್ಲಿ ಹಲವು ದಿನಗಳ ನಂತರ ಅಕ್ಷರಗಳನ್ನು ಕಟ್ಟುತ್ತಿದ್ದೇನೆ. ಇದೇನೂ ಲೇಖನವಲ್ಲ. ಸುಮ್ಮನೆ ಕುಳಿತುಕೊಂಡು ಬರೆದ - ಯಾರನ್ನೂ ನೇರವಾಗಿ ಉದ್ದೇಶಿಸಿರದ - ಒಂದು ಪುಟ್ಟ ಪತ್ರ. ಹೊಸ ಬರಹದೊಂದಿಗೆ ಮತ್ತೆ ಕೆಲವೇ ದಿನಗಳಲ್ಲಿ ಭೇಟಿಯಾಗೋಣ.) ಆತ್ಮೀಯ ಸ್ನೇಹಿತೆ... ಬರಹವನ್ನು ಮುಂದುವರೆಸುವದೋ ಬೇಡವೋ ಎನ್ನುವ ಪ್ರಶ್ನೆಯನ್ನಿಟ್ಟುಕೊಂಡು ನೀನು ನನಗೆ ಬರೆದ ಪತ್ರ ಓದಿದೆ. ಆ ಪತ್ರವನ್ನೇ ನಿನ್ನ ಬ್ಲಾಗಿನಲ್ಲಿ ಹಾಕಿದ್ದರೆ ಒಂದು ಒಳ್ಳೆಯ ಲೇಖನ ಆಗುತ್ತಿತ್ತು. ನಾನು ನಿನಗೆ support ಮಾಡ್ತಿ ಅಂತ ಬರೆದಿದ್ದೀಯಾ. ಧನ್ಯವಾದ ನೆನಪಿಟ್ಟುಕೊಂಡದ್ದಕ್ಕೆ! ಅದಿರಲಿ. ಒಂದು ವಿಷಯ ನೆನಪಿರಲಿ. ಯಾರೊಬ್ಬರ ಬರಹವೂ ಪರಿಪೂರ್ಣ ಅಲ್ಲ. ಪರಿಪಕ್ವವೂ ಅಲ್ಲ. ನನ್ನ ಬರಹ ಪರಿಪಕ್ವ ಅಂತ ಇವತ್ತಿನವರೆಗೆ ಯಾರೂ ಘೋಷಿಸಿಕೊಂಡಿಲ್ಲ. ಹಾಗೊಮ್ಮೆ ಯಾರಾದರೂ ಘೋಷಿಸಿಕೊಂಡರೆ ಅದು ಅಹಂಕಾರವಷ್ಟೆ. ನೀನು ಲಂಕೇಶ್, ಅಡಿಗರ ಉದಾಹರಣೆ ಕೊಟ್ಟಿದ್ದೀಯಾ. ಇದರರ್ಥ ನೀನು ಅವರ ಬರಹ ಓದುತ್ತಿದ್ದೀಯಾ ಎಂದಾಯಿತು. ಬಹಳ ಒಳ್ಳೆಯದು. ಅವರ ಬರಹಗಳಿಗೆ ದೊಡ್ಡ ಪ್ರಮಾಣದ ಓದುಗರಿದ್ದಾರೆ. ಹಾಗೆಯೇ ಲಂಕೇಶರ ಬರಹಗಳನ್ನು ಟೀಕಿಸುವ ಒಂದು ಬಣವೇ ಇದೆ. ಅಡಿಗರ ಬರಹವನ್ನೂ ಹಲವು ಮಂದಿ ಪ್ರಶ್ನಿಸಿದ್ದಾರೆ. ಇವರಿಬ್ಬರೇ ಅಲ್ಲ ಜಗತ್ತಿನ ಯಾವ ಬರಹಗಾರನ ಬರಹವೂ ಪ್ರಶ್ನಾತೀತವಲ್ಲ. ನನ್ನದು-ನಿನ್ನದೂ ಕೂಡ. ನೀನು ಬರೆದದ್ದನ್ನು ಹತ್ತು...