ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಹರಟೆ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಆತ್ಮಹತ್ಯೆಯ ಬಗ್ಗೆ ಯೋಚಿಸುತ್ತಿದ್ದೇನೆ!

ದೇವರಾಣೆಗೂ ಹೌದು ನಾನು ಆತ್ಮಹತ್ಯೆಯ ಬಗ್ಗೆಯೇ ಯೋಚಿಸುತ್ತಿದ್ದೇನೆ. ಇದು ಭಾರತೀಯ ಕಾನೂನಿನ ಪ್ರಕಾರ ತಪ್ಪು ಅಂತ ಚೆನ್ನಾಗಿ ಗೊತ್ತು. ಆತ್ಮಹತ್ಯೆಗೆ ಯತ್ನಿಸಿ ಒಂದು ವೇಳೆ ಅದರಲ್ಲಿ ಸಫಲನಾಗದಿದ್ದರೆ ಭಾರತೀಯ ದಂಡಸಂಹಿತೆಯ ಪ್ರಕಾರ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯ ಮೇಲೆ ಕೇಸು ಹಾಕಬಹುದು, ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ಆ ವ್ಯಕ್ತಿಗೆ ಶಿಕ್ಷೆಯನ್ನೂ ವಿಧಿಸಬಹುದು ಅಂತಲೂ ಗೊತ್ತಿದೆ. ಅದಲ್ಲದೆ, ಇನ್ನೊಬ್ಬ ವ್ಯಕ್ತಿಯನ್ನು ಆತ್ಮಹತ್ಯೆಗೆ ಪ್ರಚೋದಿಸುವುದು ಕೂಡ ಕಾನೂನಿನ ಪ್ರಕಾರ ಮತ್ತು ನೈತಿಕ ದೃಷ್ಟಿಯಿಂದಲೂ ಅಪರಾಧ ಎಂಬ ಅರಿವೂ ಇದೆ. ಆದರೂ 'ಆತ್ಮಹತ್ಯೆ'ಯ ಬಗ್ಗೆಯೇ ಯೋಚಿಸುತ್ತಿದ್ದೇನೆ! ಅನುಮಾನ ಬೇಡ. ದಿನಂಪ್ರತಿ ಪತ್ರಿಗಳಲ್ಲಿ ಮತ್ತು ವಾರ್ತಾ ವಾಹಿನಿಗಳಲ್ಲಿ ಆತ್ಮಹತ್ಯೆಯ ವರದಿಗಳನ್ನು ನೋಡಿ, ಕೇಳಿ, ಓದಿ ಬೇಸರ ಮೂಡಿದೆ. ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಲಿಲ್ಲ ಎಂಬ ಕಾರಣಕ್ಕೆ ಕೀಟನಾಶಕ ಸೇವಿಸಿಯೋ ಅಥವಾ ನೇಣು ಬಿಗಿದುಕೊಂಡೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ತಮ್ಮ ನಿರೀಕ್ಷೆಗೆ ತಕ್ಕಂತೆ ಪರೀಕ್ಷೆಯಲ್ಲಿ ಅಂಕ ಬರಲಿಲ್ಲ ಅಂತಲೋ ಅಥವಾ ರ್ಯಾಂಕ್ ತಪ್ಪಿಹೋಯಿತು ಅಂತಲೋ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಪ್ರೇಮಿಗಳ ಆತ್ಮಹತ್ಯೆಯ ಬಗ್ಗೆ ಬರೆದರೆ ಜಾಗ ಹಾಳು, ಹೇಳಿದರೆ ಬಾಯಿ ಹಾಳು. ಅವಳು ಬೈದಳು, ಅವನು ಕೈಕೊಟ್ಟ ಹೀಗೆ ನಾನಾ ಕಾರಣ ಒಡ್ಡಿ ಪ್ರೇಮಿಗಳು ಆತ್ಮಹತ್ಯೆ ಮಾ...

ಇತಿಹಾಸದ ಬಗ್ಗೆ ನಮ್ಮ ಹರಟೆ

ಮೊನ್ನೆ ವೈಯುಕ್ತಿಕ ಕಾರಣಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಹೋಗಿದ್ದೆ. ಹಲವಾರು ಐತಿಹಾಸಿಕ ಸ್ಥಳಗಳನ್ನು ತನ್ನ ಒಡಲೊಳಗೆ ಹುದುಗಿಸಿಕೊಂಡಿರುವ ಊರು ಶಿರಸಿ. ಕದಂಬರಾಳಿದ ಇತಿಹಾಸ ಪ್ರಸಿದ್ಧ ಬನವಾಸಿ, ಅರಸಪ್ಪ ನಾಯಕನ ಸೋದೆ (ಅಥವಾ ಸೋಂದಾ)ಯಂತಹ ಐತಿಹಾಸಿಕ ಪ್ರದೇಶಗಳಿರುವುದು ಶಿರಸಿ ತಾಲೂಕಿನಲ್ಲಿ. ಪಶ್ಚಿಮ ಘಟ್ಟಗಳ ಬೆಟ್ಟವೊಂದರ 'ಶಿರ' ಭಾಗದಲ್ಲಿ ಈ ಪಟ್ಟಣ ಬೆಳೆದಿರುವುದರಿಂದಲೇ ಇದಕ್ಕೆ 'ಶಿರಸಿ' ಎಂಬ ಹೆಸರು ಬಂತು. ಹಾಗೆ ಶಿರಸಿ ತಾಲೂಕಿನ ಸೋಂದಾ ಗ್ರಾಮಕ್ಕೆ ಹೋಗಿದ್ದಾಗ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪುರಾತತ್ವ ಶಾಸ್ತ್ರದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡಿ ಈಗ ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿರುವ ನನ್ನ ಯುವ ಮಿತ್ರರೊಬ್ಬರನ್ನು ಭೇಟಿಯಾಗುವ ಅವಕಾಶವೂ ಸಿಕ್ಕಿತ್ತು. ಹಾಗೇ ಅವರ ಜೊತೆ ಅದು-ಇದು ಅಂತ ಮಾತನಾಡುತ್ತಿದ್ದಾಗ ನಮ್ಮ ಮಾತುಕತೆ ನಿಧಾನವಾಗಿ ಇತಿಹಾಸವನ್ನು ಶಾಸ್ತ್ರೀಯವಾಗಿ ಓದುವುದರ ಅಗತ್ಯತೆಯ ಬಗ್ಗೆ ಹೊರಳಿತು. ಪ್ರಾಥಮಿಕ ಶಾಲೆಗಳ ಇತಿಹಾಸ ಪಠ್ಯಪುಸ್ತಕಗಳು, ಅವುಗಳಲ್ಲಿ ಬರುವ ಯುದ್ಧ ವಿವರಣೆಗಳು, ರಾಜರ ಜೀವನ ವಿಧಾನಗಳ ಬಗ್ಗೆಯೂ ನಾವು ಮಾತನಾಡಿದೆವು. ಇತಿಹಾಸವನ್ನು ಓದಲು ಇವತ್ತಿನ ಯುವ ಸಮುದಾಯ ತೋರಿಸುತ್ತಿರುವ ನಿರಾಸಕ್ತಿಯ ಬಗ್ಗೆ ನಮ್ಮಲ್ಲಿ ನಡೆದ ಮಾತುಕತೆಯ ಸಾರವನ್ನು ನಿಮಗೂ ಉಪಯೋಗವಾಗಬಹುದು ಎಂಬ ಕಾರಣದಿಂದ ಇಲ್ಲಿ ಬರೆದಿದ್ದೇನೆ. ಈ ಬರಹದಲ್ಲಿ 'ಇತಿಹಾಸ ಪಠ್ಯಪುಸ್ತಕಗಳು' ಎ...